<p><strong>ಮಾಗಡಿ:</strong> ‘ವಸೂಲಿ ಗಿರಾಕಿಗಳ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ’ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ವಿರುದ್ಧ ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು.</p>.<p>ಮಾಗಡಿ ಕೋಟೆ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿದ ₹103 ಕೋಟಿ ಅನುದಾನದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಪಾತ್ರವೇನೂ ಇಲ್ಲ ಎಂಬ ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಟೀಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ಎಚ್.ಎಂ.ಕೃಷ್ಣಮೂರ್ತಿ ವಸೂಲಿ ಗಿರಾಕಿ ಎಂಬುದು ಗೊತ್ತಾಗಿದೆ. ಕಳೆದ ಬಾರಿ ಕೆಂಪೇಗೌಡ ಜಯಂತಿಗೆ ಹಣ ನೀಡುವಂತೆ ಕೇಳಿಕೊಂಡಿದ್ದರು. ₹5 ಲಕ್ಷ ಖರ್ಚು ಮಾಡಿ ₹25 ಲಕ್ಷವನ್ನು ಬಿಬಿಎಂಪಿಯಲ್ಲಿ ವಸೂಲಿ ಮಾಡಿರುವುದು ಗೊತ್ತಾಗಿದೆ’ ಎಂದರು.</p>.<p>‘ನಾನು ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆದಿರಲಿಲ್ಲ. ಅವರೇ ಬಂದಿದ್ದರು. ನನ್ನ ಬಳಿ ಬರುವ ಹಿಂದಿನ ರಾತ್ರಿ ಮಾಜಿ ಶಾಸಕ ಎ.ಮಂಜುನಾಥ್ ಅವರಿಂದ ಹಣ ಪಡೆದು ಬಂದಿದ್ದರು’ ಎಂದು ಆರೋಪ ಮಾಡಿದರು.</p>.<p>ಎಚ್.ಎಂ. ಕೃಷ್ಣಮೂರ್ತಿ ಅವರು ಹೇಳಿದಂತೆ ಮಾಗಡಿ ಕೋಟೆ ಅಭಿವೃದ್ಧಿ ಮಾಡಲು ಸಾಧ್ಯವೇ? ಕಂದಕದ ನಾಲ್ಕು ಭಾಗದಲ್ಲಿ ತೆರವು ಮಾಡಲು ಸಾಧ್ಯವಾಗುತ್ತಾ? ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.</p>.<p>ಕೆಂಪೇಗೌಡ ಪ್ರತಿಮೆ ಸ್ಥಳಾಂತರದ ಬಗ್ಗೆ ವಿರೋಧ ವ್ಯಕ್ತಪಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಸ್ವಲ್ಪ ವಿಳಂಬವಾಗಬಹುದೇ ಹೊರತು, ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.</p>.<p>ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ನರಸಿಂಹಮೂರ್ತಿ, ಬ್ಯಾಲಕೆರೆ ಚಿಕ್ಕರಾಜು, ಗಂಗಹನುಮಯ್ಯ, ಚಿಲಿಪಿಲಿ ರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ‘ವಸೂಲಿ ಗಿರಾಕಿಗಳ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ’ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ವಿರುದ್ಧ ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು.</p>.<p>ಮಾಗಡಿ ಕೋಟೆ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿದ ₹103 ಕೋಟಿ ಅನುದಾನದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಪಾತ್ರವೇನೂ ಇಲ್ಲ ಎಂಬ ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಟೀಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ಎಚ್.ಎಂ.ಕೃಷ್ಣಮೂರ್ತಿ ವಸೂಲಿ ಗಿರಾಕಿ ಎಂಬುದು ಗೊತ್ತಾಗಿದೆ. ಕಳೆದ ಬಾರಿ ಕೆಂಪೇಗೌಡ ಜಯಂತಿಗೆ ಹಣ ನೀಡುವಂತೆ ಕೇಳಿಕೊಂಡಿದ್ದರು. ₹5 ಲಕ್ಷ ಖರ್ಚು ಮಾಡಿ ₹25 ಲಕ್ಷವನ್ನು ಬಿಬಿಎಂಪಿಯಲ್ಲಿ ವಸೂಲಿ ಮಾಡಿರುವುದು ಗೊತ್ತಾಗಿದೆ’ ಎಂದರು.</p>.<p>‘ನಾನು ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆದಿರಲಿಲ್ಲ. ಅವರೇ ಬಂದಿದ್ದರು. ನನ್ನ ಬಳಿ ಬರುವ ಹಿಂದಿನ ರಾತ್ರಿ ಮಾಜಿ ಶಾಸಕ ಎ.ಮಂಜುನಾಥ್ ಅವರಿಂದ ಹಣ ಪಡೆದು ಬಂದಿದ್ದರು’ ಎಂದು ಆರೋಪ ಮಾಡಿದರು.</p>.<p>ಎಚ್.ಎಂ. ಕೃಷ್ಣಮೂರ್ತಿ ಅವರು ಹೇಳಿದಂತೆ ಮಾಗಡಿ ಕೋಟೆ ಅಭಿವೃದ್ಧಿ ಮಾಡಲು ಸಾಧ್ಯವೇ? ಕಂದಕದ ನಾಲ್ಕು ಭಾಗದಲ್ಲಿ ತೆರವು ಮಾಡಲು ಸಾಧ್ಯವಾಗುತ್ತಾ? ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.</p>.<p>ಕೆಂಪೇಗೌಡ ಪ್ರತಿಮೆ ಸ್ಥಳಾಂತರದ ಬಗ್ಗೆ ವಿರೋಧ ವ್ಯಕ್ತಪಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಸ್ವಲ್ಪ ವಿಳಂಬವಾಗಬಹುದೇ ಹೊರತು, ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.</p>.<p>ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ನರಸಿಂಹಮೂರ್ತಿ, ಬ್ಯಾಲಕೆರೆ ಚಿಕ್ಕರಾಜು, ಗಂಗಹನುಮಯ್ಯ, ಚಿಲಿಪಿಲಿ ರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>