<p><strong>ಚನ್ನಪಟ್ಟಣ</strong>: ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಒಬ್ಬರು ಆಯತಪ್ಪಿ ಬೈಕ್ನಿಂದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ಲಕ್ಷ್ಮಣ್ (50) ಮೃತಪಟ್ಟವರು.</p>.<p>ಕಳೆದ ಒಂದೂವರೆ ವರ್ಷದಿಂದ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಠಾಣೆ ಕರ್ತವ್ಯಕ್ಕೆ ಹಾಜರಾಗಲು ಇವರು ಸಮವಸ್ತ್ರ ಧರಿಸಿ ಮನೆಯಿಂದ ಬೈಕ್ನಲ್ಲಿ ಹೊರಟಿದ್ದರು. ಆಗ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. </p>.<p>ಮಂಗಳವಾರ ಬೆಳಗ್ಗೆ ನೀರಿನಲ್ಲಿ ಮೃತದೇಹ ತೇಲುತ್ತಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರತೆಗೆದು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಒಬ್ಬರು ಆಯತಪ್ಪಿ ಬೈಕ್ನಿಂದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ಲಕ್ಷ್ಮಣ್ (50) ಮೃತಪಟ್ಟವರು.</p>.<p>ಕಳೆದ ಒಂದೂವರೆ ವರ್ಷದಿಂದ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಠಾಣೆ ಕರ್ತವ್ಯಕ್ಕೆ ಹಾಜರಾಗಲು ಇವರು ಸಮವಸ್ತ್ರ ಧರಿಸಿ ಮನೆಯಿಂದ ಬೈಕ್ನಲ್ಲಿ ಹೊರಟಿದ್ದರು. ಆಗ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. </p>.<p>ಮಂಗಳವಾರ ಬೆಳಗ್ಗೆ ನೀರಿನಲ್ಲಿ ಮೃತದೇಹ ತೇಲುತ್ತಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರತೆಗೆದು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>