<p><strong>ರಾಮನಗರ</strong>: ಇಲ್ಲಿನ ನಗರಸಭೆ ವತಿಯಿಂದ 2010-11ರಿಂದ 2021-22ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ (ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ಅವಾಸ್ ಯೋಜನೆ) ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕಾಗಿರುತ್ತದೆ.</p>.<p>ಈಗಾಗಲೇ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾಗಿ ಮನೆಗಳು ಅಪೂರ್ಣಗೊಂಡಿರುವ ಫಲಾನುಭವಿಗಳಿಗೆ ನೋಟೀಸ್ ನೀಡಲಾಗಿದೆ. ಕೆಲವು ಫಲಾನುಭವಿಗಳು ನೋಟೀಸ್ ಸ್ವೀಕರಿಸದಿರುವುದು ಕಂಡುಬಂದಿರುತ್ತದೆ. ಜೊತೆಗೆ ಪ್ರಸ್ತುತ ವಿಳಾಸದಲ್ಲಿ ಸಂಪರ್ಕಕ್ಕೆ ಸಿಗದೇ ಇರುವ ಕಾರಣ ನೋಟೀಸ್ ಜಾರಿ ಮಾಡಲು ಸಾಧ್ಯವಾಗಿರುವುದಿಲ್ಲ.</p>.<p>ಹಾಗಾಗಿ, ತಕ್ಷಣ ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಸೂಕ್ತ ಮಾಹಿತಿಯನ್ನು ನೀಡಬೇಕು. ಒಂದು ತಿಂಗಳ ಒಳಗಾಗಿ ಕಟ್ಟಡವನ್ನು ಪೂರ್ಣಗೊಳಿಸಲು ಮತ್ತೊಮ್ಮೆ ತಿಳಿಸಲಾಗಿದೆ. ತಪ್ಪಿದಲ್ಲಿ ಸರ್ಕಾರದ ನಿಯಮದಂತೆ ಕ್ರಮಕೈಗೊಳ್ಳಲಾಗುವುದು ಎಂದು ರಾಮನಗರ ನಗರಸಭೆಯ ಪೌರಾಯುಕ್ತ ಡಾ. ಜಯಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಇಲ್ಲಿನ ನಗರಸಭೆ ವತಿಯಿಂದ 2010-11ರಿಂದ 2021-22ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ (ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ಅವಾಸ್ ಯೋಜನೆ) ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕಾಗಿರುತ್ತದೆ.</p>.<p>ಈಗಾಗಲೇ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾಗಿ ಮನೆಗಳು ಅಪೂರ್ಣಗೊಂಡಿರುವ ಫಲಾನುಭವಿಗಳಿಗೆ ನೋಟೀಸ್ ನೀಡಲಾಗಿದೆ. ಕೆಲವು ಫಲಾನುಭವಿಗಳು ನೋಟೀಸ್ ಸ್ವೀಕರಿಸದಿರುವುದು ಕಂಡುಬಂದಿರುತ್ತದೆ. ಜೊತೆಗೆ ಪ್ರಸ್ತುತ ವಿಳಾಸದಲ್ಲಿ ಸಂಪರ್ಕಕ್ಕೆ ಸಿಗದೇ ಇರುವ ಕಾರಣ ನೋಟೀಸ್ ಜಾರಿ ಮಾಡಲು ಸಾಧ್ಯವಾಗಿರುವುದಿಲ್ಲ.</p>.<p>ಹಾಗಾಗಿ, ತಕ್ಷಣ ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಸೂಕ್ತ ಮಾಹಿತಿಯನ್ನು ನೀಡಬೇಕು. ಒಂದು ತಿಂಗಳ ಒಳಗಾಗಿ ಕಟ್ಟಡವನ್ನು ಪೂರ್ಣಗೊಳಿಸಲು ಮತ್ತೊಮ್ಮೆ ತಿಳಿಸಲಾಗಿದೆ. ತಪ್ಪಿದಲ್ಲಿ ಸರ್ಕಾರದ ನಿಯಮದಂತೆ ಕ್ರಮಕೈಗೊಳ್ಳಲಾಗುವುದು ಎಂದು ರಾಮನಗರ ನಗರಸಭೆಯ ಪೌರಾಯುಕ್ತ ಡಾ. ಜಯಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>