<p><strong>ರಾಮನಗರ:</strong> ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಶೀಲ ಶಂಕಿಸಿದ ಯಾರಬ್ ನಗರದ ವ್ಯಕ್ತಿಯೊಬ್ಬ ಬುಧವಾರ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. </p>.<p>ಸೂಫಿಯಾ ಬಾನು (21) ಕೊಲೆಯಾದ ಮಹಿಳೆ. ಆರೋಪಿ ಪತಿ ಸಲ್ಮಾನ್ (22) ಎಂಬಾತನನ್ನು ರಾಮನಗರ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಯಾರಬ್ ನಗರದ ನಿವಾಸಿಗಳಾದ ಇಬ್ಬರೂ ಫಿಲೇಚರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ನಂತರ ಎರಡೂ ಕುಟುಂಬದವರು ನಾಲ್ಕು ತಿಂಗಳ ಹಿಂದೆ ಇಬ್ಬರಿಗೂ ಮದುವೆ ಮಾಡಿದ್ದರು. ಸೂಫಿಯಾ ತಾಯಿ, ಮಗಳು ಮತ್ತು ಅಳಿಯನನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡಿದ್ದರು.</p>.<p>ಮದುವೆ ಬಳಿಕವೂ ದಂಪತಿ ಒಂದೇ ಫಿಲೇಚರ್ನಲ್ಲಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ಚನ್ನಾಗಿಯೇ ಪತ್ನಿಯನ್ನು ನೋಡಿಕೊಳ್ಳುತ್ತಿದ್ದ ಸಲ್ಮಾನ್, ನಂತರ ಸೂಫಿಯಾ ಶೀಲ ಶಂಕೆ ವ್ಯಕ್ತಪಡಿಸಿ ಆಗಾಗ ಜಗಳವಾಡುತ್ತಿದ್ದ. ಆಗ ತಾಯಿ ಸೇರಿದಂತೆ ಹಿರಿಯರು ಸಮಾಧಾನಪಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>ಎಂದಿನಂತೆ ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ದಂಪತಿ ಕೆಲ ಹೊತ್ತಿನಲ್ಲೇ ಜಗಳವಾಡತೊಡಗಿದರು. ಈ ವೇಳೆ ತಾಯಿ ಮನೆಯಾಚೆ ಇದ್ದರು. ಕೆಲ ಹೊತ್ತಿನ ನಂತರ ಸೂಫಿಯಾ, ‘ಅಮ್ಮಾ ಚಾಕುವಿನಿಂದ ಚುಚ್ಚುತ್ತಿದ್ದಾನೆ’ ಎಂದು ಕೂಗಿಕೊಂಡರು. ತಕ್ಷಣ ತಾಯಿ ಒಳಕ್ಕೆ ಹೋಗಿ ನೋಡಿದಾಗ ಅವರ ಎದುರಿಗೇ ಸಲ್ಮಾನ್ ಪತ್ನಿಯ ಕುತ್ತಿಗೆ ಹಾಗೂ ಹೊಟ್ಟೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.</p>.<p>ಕೂಡಲೇ ತಾಯಿ ಸ್ಥಳೀಯರ ನೆರವಿನಿಂದ ಸೂಫಿಯಾ ಅವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಸೂಫಿಯಾ ಕೊನೆಯುಸಿರೆಳೆದಿದ್ದರು. ಘಟನೆ ಬಳಿಕ, ಸಲ್ಮಾನ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚಿನ ಜನರು ಜಮಾಯಿಸಿದರು. ಪ್ರೀತಿಸಿ ಮದುವೆಯಾಗಿದ್ದ ಅಮಾಯಕ ಹೆಣ್ಣು ಮಗಳನ್ನು ಕೊಲೆ ಮಾಡಿರುವ ಸಲ್ಮಾನ್ಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಗುರುವಾರ ಅಂತ್ಯಕ್ರಿಯೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಶೀಲ ಶಂಕಿಸಿದ ಯಾರಬ್ ನಗರದ ವ್ಯಕ್ತಿಯೊಬ್ಬ ಬುಧವಾರ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. </p>.<p>ಸೂಫಿಯಾ ಬಾನು (21) ಕೊಲೆಯಾದ ಮಹಿಳೆ. ಆರೋಪಿ ಪತಿ ಸಲ್ಮಾನ್ (22) ಎಂಬಾತನನ್ನು ರಾಮನಗರ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಯಾರಬ್ ನಗರದ ನಿವಾಸಿಗಳಾದ ಇಬ್ಬರೂ ಫಿಲೇಚರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ನಂತರ ಎರಡೂ ಕುಟುಂಬದವರು ನಾಲ್ಕು ತಿಂಗಳ ಹಿಂದೆ ಇಬ್ಬರಿಗೂ ಮದುವೆ ಮಾಡಿದ್ದರು. ಸೂಫಿಯಾ ತಾಯಿ, ಮಗಳು ಮತ್ತು ಅಳಿಯನನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡಿದ್ದರು.</p>.<p>ಮದುವೆ ಬಳಿಕವೂ ದಂಪತಿ ಒಂದೇ ಫಿಲೇಚರ್ನಲ್ಲಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ಚನ್ನಾಗಿಯೇ ಪತ್ನಿಯನ್ನು ನೋಡಿಕೊಳ್ಳುತ್ತಿದ್ದ ಸಲ್ಮಾನ್, ನಂತರ ಸೂಫಿಯಾ ಶೀಲ ಶಂಕೆ ವ್ಯಕ್ತಪಡಿಸಿ ಆಗಾಗ ಜಗಳವಾಡುತ್ತಿದ್ದ. ಆಗ ತಾಯಿ ಸೇರಿದಂತೆ ಹಿರಿಯರು ಸಮಾಧಾನಪಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>ಎಂದಿನಂತೆ ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ದಂಪತಿ ಕೆಲ ಹೊತ್ತಿನಲ್ಲೇ ಜಗಳವಾಡತೊಡಗಿದರು. ಈ ವೇಳೆ ತಾಯಿ ಮನೆಯಾಚೆ ಇದ್ದರು. ಕೆಲ ಹೊತ್ತಿನ ನಂತರ ಸೂಫಿಯಾ, ‘ಅಮ್ಮಾ ಚಾಕುವಿನಿಂದ ಚುಚ್ಚುತ್ತಿದ್ದಾನೆ’ ಎಂದು ಕೂಗಿಕೊಂಡರು. ತಕ್ಷಣ ತಾಯಿ ಒಳಕ್ಕೆ ಹೋಗಿ ನೋಡಿದಾಗ ಅವರ ಎದುರಿಗೇ ಸಲ್ಮಾನ್ ಪತ್ನಿಯ ಕುತ್ತಿಗೆ ಹಾಗೂ ಹೊಟ್ಟೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.</p>.<p>ಕೂಡಲೇ ತಾಯಿ ಸ್ಥಳೀಯರ ನೆರವಿನಿಂದ ಸೂಫಿಯಾ ಅವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಸೂಫಿಯಾ ಕೊನೆಯುಸಿರೆಳೆದಿದ್ದರು. ಘಟನೆ ಬಳಿಕ, ಸಲ್ಮಾನ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚಿನ ಜನರು ಜಮಾಯಿಸಿದರು. ಪ್ರೀತಿಸಿ ಮದುವೆಯಾಗಿದ್ದ ಅಮಾಯಕ ಹೆಣ್ಣು ಮಗಳನ್ನು ಕೊಲೆ ಮಾಡಿರುವ ಸಲ್ಮಾನ್ಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಗುರುವಾರ ಅಂತ್ಯಕ್ರಿಯೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>