<p><strong>ರಾಮನಗರ:</strong> ಅನೈತಿಕ ಸಂಬಂಧದ ಅನುಮಾನದಿಂದಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ನಂತರ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ತಾಲ್ಲೂಕಿನ ಕೈಲಾಂಚ ಹೋಬಳಿಯ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ಈ ನಡೆದಿದೆ.</p><p>ನಾಗಮ್ಮ (42) ಕೊಲೆಯಾದವರು. ಆರೋಪಿ ಕಣಿ ಮಾದಯ್ಯ (52) ಈಗ ಪೊಲೀಸರ ಬಂಧನದಲ್ಲಿದ್ದಾನೆ. ಬೆಳಿಗ್ಗೆ 7.30ರ ಸುಮಾರಿಗೆ ಆರೋಪಿ ಕೃತ್ಯ ಎಸಗಿದ್ದಾನೆ. ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.ರಾಮನಗರ: ಅಲೆಮಾರಿಗಳಿಗೆ ವಸತಿ ಸೌಲಭ್ಯ.<p>ದನದ ವ್ಯಾಪಾರ ದಲ್ಲಾಳಿಯಾಗಿದ್ದ ಮಾದಯ್ಯ, ಗೃಹಿಣಿಯಾಗಿದ್ದ ನಾಗಮ್ಮ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆಗಾಗ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಪತಿ ಮತ್ತು ಪತ್ನಿ ಇಬ್ಬರು ಅಕ್ಕಪಕ್ಕದ ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಮಕ್ಕಳಿಬ್ಬರೂ ನಾಗಮ್ಮ ಅವರ ಜೊತೆಗಿದ್ದರು. ಆರೋಪಿ ಮತ್ತು ಆತನ ತಾಯಿ ಇಬ್ಬರು ಒಟ್ಟಿಗಿದ್ದರು.</p><p>ದಂಪತಿ ಪ್ರತ್ಯೇಕವಾಗಿ ವಾಸವಿದ್ದರೂ ಜಗಳ ನಿಂತಿರಲಿಲ್ಲ. ನಾಗಮ್ಮ ಮನೆಗೆ ಯಾರಾದರೂ ಬಂದರೆ ಮಾದಯ್ಯ ಶೀಲ ಶಂಕಿಸಿ ಜಗಳವಾಡುತ್ತಿದ್ದ. ಭಾನುವಾರ ಬೆಳಿಗ್ಗೆ ಮಕ್ಕಳಿಬ್ಬರೂ ಕೆಲಸ ನಿಮಿತ್ತ ಹೊರಕ್ಕೆ ಹೋಗಿದ್ದರು. ಆಗ ಮಾದಯ್ಯ ಪತ್ನಿ ಜೊತೆ ಕ್ಯಾತೆ ತೆಗೆದಿದ್ದ ಎಂದು ಪೊಲೀಸರು ಹೇಳಿದರು.</p>.ರಾಮನಗರ: ಡಿ.ಕೆ.ಶಿವಕುಮಾರ್ ಸಿಎಂ ಸಂಭ್ರಮಾಚರಣೆಗೆ ‘ಕೈ’ ಅಂಕುಶ.<p>ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಮಾದಯ್ಯ ಮನೆಯಲ್ಲಿದ್ದ ಮಚ್ಚಿನಿಂದ ನಾಗಮ್ಮ ಅವರ ಮೇಲೆ ಮನಸೋ ಇಚ್ಛೆ ಹೊಡೆದು ಕೊಲೆ ಮಾಡಿದ್ದಾನೆ. ನಂತರ ನೇರವಾಗಿ ಠಾಣೆಗೆ ಬಂದು, ಪತ್ನಿಯನ್ನು ಕೊಲೆ ಮಾಡಿರುವುದಾಗಿ ಹೇಳಿ ಶರಣಾಗಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು.</p><p>ಕೊಲೆಯಾದ ನಾಗಮ್ಮ ನೆಲಮಲೆ ಗ್ರಾಮದವರಾಗಿದ್ದಾರೆ. ಸಂಶಯಪಟ್ಟು ಜಗಳವಾಡುತ್ತಿದ್ದ ಪತಿ ವಿರುದ್ಧ ವರ್ಷದ ಹಿಂದೆ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆರೋಪಿ ಮಾದಯ್ಯ ಇತ್ತೀಚೆಗೆ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಅನುಮಾನದ ಮೇರೆಗೆ, ವ್ಯಕ್ತಿಯೊಬ್ಬನನ್ನು ಥಳಿಸಿದ್ದ ಎಂದು ಪೊಲೀಸರು ಹೇಳಿದರು.</p><p>ಘಟನಾ ಸ್ಥಳಕ್ಕೆ ತೆರಳಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನೆ ಕುರಿತು ಮಾದಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ಸ್ಥಳಕ್ಕೆ ಇನ್ಸ್ಪೆಕ್ಟರ್ ಮುರಳಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.ರಾಮನಗರ: ತೆರಿಗೆ ಇಲಾಖೆ ಅಧಿಕಾರಿಗಳಿಂದ ಐ.ಟಿ ಕಾಯ್ದೆ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಅನೈತಿಕ ಸಂಬಂಧದ ಅನುಮಾನದಿಂದಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ನಂತರ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ತಾಲ್ಲೂಕಿನ ಕೈಲಾಂಚ ಹೋಬಳಿಯ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ಈ ನಡೆದಿದೆ.</p><p>ನಾಗಮ್ಮ (42) ಕೊಲೆಯಾದವರು. ಆರೋಪಿ ಕಣಿ ಮಾದಯ್ಯ (52) ಈಗ ಪೊಲೀಸರ ಬಂಧನದಲ್ಲಿದ್ದಾನೆ. ಬೆಳಿಗ್ಗೆ 7.30ರ ಸುಮಾರಿಗೆ ಆರೋಪಿ ಕೃತ್ಯ ಎಸಗಿದ್ದಾನೆ. ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.ರಾಮನಗರ: ಅಲೆಮಾರಿಗಳಿಗೆ ವಸತಿ ಸೌಲಭ್ಯ.<p>ದನದ ವ್ಯಾಪಾರ ದಲ್ಲಾಳಿಯಾಗಿದ್ದ ಮಾದಯ್ಯ, ಗೃಹಿಣಿಯಾಗಿದ್ದ ನಾಗಮ್ಮ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆಗಾಗ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಪತಿ ಮತ್ತು ಪತ್ನಿ ಇಬ್ಬರು ಅಕ್ಕಪಕ್ಕದ ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಮಕ್ಕಳಿಬ್ಬರೂ ನಾಗಮ್ಮ ಅವರ ಜೊತೆಗಿದ್ದರು. ಆರೋಪಿ ಮತ್ತು ಆತನ ತಾಯಿ ಇಬ್ಬರು ಒಟ್ಟಿಗಿದ್ದರು.</p><p>ದಂಪತಿ ಪ್ರತ್ಯೇಕವಾಗಿ ವಾಸವಿದ್ದರೂ ಜಗಳ ನಿಂತಿರಲಿಲ್ಲ. ನಾಗಮ್ಮ ಮನೆಗೆ ಯಾರಾದರೂ ಬಂದರೆ ಮಾದಯ್ಯ ಶೀಲ ಶಂಕಿಸಿ ಜಗಳವಾಡುತ್ತಿದ್ದ. ಭಾನುವಾರ ಬೆಳಿಗ್ಗೆ ಮಕ್ಕಳಿಬ್ಬರೂ ಕೆಲಸ ನಿಮಿತ್ತ ಹೊರಕ್ಕೆ ಹೋಗಿದ್ದರು. ಆಗ ಮಾದಯ್ಯ ಪತ್ನಿ ಜೊತೆ ಕ್ಯಾತೆ ತೆಗೆದಿದ್ದ ಎಂದು ಪೊಲೀಸರು ಹೇಳಿದರು.</p>.ರಾಮನಗರ: ಡಿ.ಕೆ.ಶಿವಕುಮಾರ್ ಸಿಎಂ ಸಂಭ್ರಮಾಚರಣೆಗೆ ‘ಕೈ’ ಅಂಕುಶ.<p>ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಮಾದಯ್ಯ ಮನೆಯಲ್ಲಿದ್ದ ಮಚ್ಚಿನಿಂದ ನಾಗಮ್ಮ ಅವರ ಮೇಲೆ ಮನಸೋ ಇಚ್ಛೆ ಹೊಡೆದು ಕೊಲೆ ಮಾಡಿದ್ದಾನೆ. ನಂತರ ನೇರವಾಗಿ ಠಾಣೆಗೆ ಬಂದು, ಪತ್ನಿಯನ್ನು ಕೊಲೆ ಮಾಡಿರುವುದಾಗಿ ಹೇಳಿ ಶರಣಾಗಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದರು.</p><p>ಕೊಲೆಯಾದ ನಾಗಮ್ಮ ನೆಲಮಲೆ ಗ್ರಾಮದವರಾಗಿದ್ದಾರೆ. ಸಂಶಯಪಟ್ಟು ಜಗಳವಾಡುತ್ತಿದ್ದ ಪತಿ ವಿರುದ್ಧ ವರ್ಷದ ಹಿಂದೆ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆರೋಪಿ ಮಾದಯ್ಯ ಇತ್ತೀಚೆಗೆ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಅನುಮಾನದ ಮೇರೆಗೆ, ವ್ಯಕ್ತಿಯೊಬ್ಬನನ್ನು ಥಳಿಸಿದ್ದ ಎಂದು ಪೊಲೀಸರು ಹೇಳಿದರು.</p><p>ಘಟನಾ ಸ್ಥಳಕ್ಕೆ ತೆರಳಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನೆ ಕುರಿತು ಮಾದಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ಸ್ಥಳಕ್ಕೆ ಇನ್ಸ್ಪೆಕ್ಟರ್ ಮುರಳಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.ರಾಮನಗರ: ತೆರಿಗೆ ಇಲಾಖೆ ಅಧಿಕಾರಿಗಳಿಂದ ಐ.ಟಿ ಕಾಯ್ದೆ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>