<p><strong>ರಾಮನಗರ:</strong> ಕೊರೊನಾ ಲಾಕ್ಡೌನ್ ಅಂಗವಾಗಿ ಭಾನುವಾರ ರಾಜ್ಯ ಸರ್ಕಾರ ಹೇರಿದ್ದ ಕರ್ಫ್ಯು ಕರೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇಡೀ ರಾಮನಗರ ಸ್ತಬ್ಧವಾಗಿತ್ತು.</p>.<p>ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಇಡೀ ಬಸ್ ನಿಲ್ದಾಣ ಬಿಕೋ ಎನ್ನುತಿತ್ತು. ಖಾಸಗಿ ವಾಹನಗಳ ಓಡಾಟಕ್ಕೂ ಕಡಿವಾಣ ಹಾಕಲಾಗಿತ್ತು. ಆಟೊಗಳ ಸಂಚಾರ ಸಹ ಇರಲಿಲ್ಲ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಪೂರ ಖಾಲಿಖಾಲಿಯಾಗಿತ್ತು. ದಿನಬಳಕೆ ವಸ್ತು ಹಾಗೂ ಆರೋಗ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಹೋಟೆಲ್ಗಳು ಸಹ ಬಾಗಿಲು ತೆರೆಯಲು ಅನುಮತಿ ಇರಲಿಲ್ಲ. ಮದ್ಯದಂಗಡಿಗಳ ಬಾಗಿಲಿಗೂ ಬೀಗ ಬಿದ್ದಿತ್ತು.</p>.<p><strong>ಮಾರುಕಟ್ಟೆಗಳು ಬಂದ್: </strong>ಸಂಪೂರ್ಣ ಲಾಕ್ಡೌನ್ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಮೂರು ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಗಳಿಗೂ ರಜೆ ಘೋಷಿಸಲಾಗಿತ್ತು. ಹೀಗಾಗಿ ಈ ದಿನ ಯಾವುದೇ ವಹಿವಾಟು ನಡೆಯಲಿಲ್ಲ. ರೈತರಿಗೆ ಮೊದಲೇ ಮಾಹಿತಿ ಸಿಕ್ಕಿದ್ದರಿಂದ ಯಾರೂ ಮಾರುಕಟ್ಟೆಗೆ ಗೂಡು ತಂದಿರಲಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಹ ರಜೆ ಘೋಷಣೆಯಾಗಿತ್ತು. ಸಂಜೆ ಮಾವು ಮಂಡಿಗಳು ಬಾಗಿಲು ತೆರೆಯಲಿಲ್ಲ.</p>.<p>ಅತ್ಯಗತ್ಯ ವಸ್ತುಗಳ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹಾಲು, ಹಣ್ಣು, ತರಕಾರಿ, ದಿನಸಿ ಮಾರಾಟದ ಅಂಗಡಿಗಳು ತೆರೆದಿದ್ದವು. ಕೆಲವು ಕಡೆ ಬೆಳಗ್ಗೆ ಮಾಂಸದ ಅಂಗಡಿಗಳಲ್ಲೂ ಮಾರಾಟ ನಡೆಯಿತು. ಆಸ್ಪತ್ರೆ, ಕ್ಲಿನಿಕ್ಗಳು, ಔಷಧದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.</p>.<p><strong>ಪೆಟ್ರೋಲ್ಗೆ ಪರದಾಟ: </strong>ಜಿಲ್ಲೆಯ ಪೆಟ್ರೋಲ್ ಬಂಕ್ಗಳು ಸಂಪೂರ್ಣವಾಗಿ ಬಾಗಿಲು ಹಾಕಿದ್ದವು. ಇದರಿಂದಾಗಿ ಪೆಟ್ರೋಲ್ ಸಿಗದೆ ವಾಹನ ಸವಾರರು ಪರದಾಡಿದರು. ತೈಲ ನೀಡುವಂತೆ ಮಾಲೀಕರ ಮುಂದೆ ಗೋಗರಿಯುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂದಿತು.</p>.<p>ನಗರದ ಪ್ರಮುಖ ವೃತ್ತಗಳೂ, ಜಿಲ್ಲೆಯ ಗಡಿ ಭಾಗಗಳಲ್ಲಿ ಪೊಲೀಸರು ಚೆಕ್ ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ರಸ್ತೆಗೆ ಇಳಿದವರನ್ನು ಎಚ್ಚರಿಕೆ ನೀಡಿ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೊರೊನಾ ಲಾಕ್ಡೌನ್ ಅಂಗವಾಗಿ ಭಾನುವಾರ ರಾಜ್ಯ ಸರ್ಕಾರ ಹೇರಿದ್ದ ಕರ್ಫ್ಯು ಕರೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇಡೀ ರಾಮನಗರ ಸ್ತಬ್ಧವಾಗಿತ್ತು.</p>.<p>ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಇಡೀ ಬಸ್ ನಿಲ್ದಾಣ ಬಿಕೋ ಎನ್ನುತಿತ್ತು. ಖಾಸಗಿ ವಾಹನಗಳ ಓಡಾಟಕ್ಕೂ ಕಡಿವಾಣ ಹಾಕಲಾಗಿತ್ತು. ಆಟೊಗಳ ಸಂಚಾರ ಸಹ ಇರಲಿಲ್ಲ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಪೂರ ಖಾಲಿಖಾಲಿಯಾಗಿತ್ತು. ದಿನಬಳಕೆ ವಸ್ತು ಹಾಗೂ ಆರೋಗ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಹೋಟೆಲ್ಗಳು ಸಹ ಬಾಗಿಲು ತೆರೆಯಲು ಅನುಮತಿ ಇರಲಿಲ್ಲ. ಮದ್ಯದಂಗಡಿಗಳ ಬಾಗಿಲಿಗೂ ಬೀಗ ಬಿದ್ದಿತ್ತು.</p>.<p><strong>ಮಾರುಕಟ್ಟೆಗಳು ಬಂದ್: </strong>ಸಂಪೂರ್ಣ ಲಾಕ್ಡೌನ್ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಮೂರು ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಗಳಿಗೂ ರಜೆ ಘೋಷಿಸಲಾಗಿತ್ತು. ಹೀಗಾಗಿ ಈ ದಿನ ಯಾವುದೇ ವಹಿವಾಟು ನಡೆಯಲಿಲ್ಲ. ರೈತರಿಗೆ ಮೊದಲೇ ಮಾಹಿತಿ ಸಿಕ್ಕಿದ್ದರಿಂದ ಯಾರೂ ಮಾರುಕಟ್ಟೆಗೆ ಗೂಡು ತಂದಿರಲಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಹ ರಜೆ ಘೋಷಣೆಯಾಗಿತ್ತು. ಸಂಜೆ ಮಾವು ಮಂಡಿಗಳು ಬಾಗಿಲು ತೆರೆಯಲಿಲ್ಲ.</p>.<p>ಅತ್ಯಗತ್ಯ ವಸ್ತುಗಳ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹಾಲು, ಹಣ್ಣು, ತರಕಾರಿ, ದಿನಸಿ ಮಾರಾಟದ ಅಂಗಡಿಗಳು ತೆರೆದಿದ್ದವು. ಕೆಲವು ಕಡೆ ಬೆಳಗ್ಗೆ ಮಾಂಸದ ಅಂಗಡಿಗಳಲ್ಲೂ ಮಾರಾಟ ನಡೆಯಿತು. ಆಸ್ಪತ್ರೆ, ಕ್ಲಿನಿಕ್ಗಳು, ಔಷಧದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.</p>.<p><strong>ಪೆಟ್ರೋಲ್ಗೆ ಪರದಾಟ: </strong>ಜಿಲ್ಲೆಯ ಪೆಟ್ರೋಲ್ ಬಂಕ್ಗಳು ಸಂಪೂರ್ಣವಾಗಿ ಬಾಗಿಲು ಹಾಕಿದ್ದವು. ಇದರಿಂದಾಗಿ ಪೆಟ್ರೋಲ್ ಸಿಗದೆ ವಾಹನ ಸವಾರರು ಪರದಾಡಿದರು. ತೈಲ ನೀಡುವಂತೆ ಮಾಲೀಕರ ಮುಂದೆ ಗೋಗರಿಯುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂದಿತು.</p>.<p>ನಗರದ ಪ್ರಮುಖ ವೃತ್ತಗಳೂ, ಜಿಲ್ಲೆಯ ಗಡಿ ಭಾಗಗಳಲ್ಲಿ ಪೊಲೀಸರು ಚೆಕ್ ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ರಸ್ತೆಗೆ ಇಳಿದವರನ್ನು ಎಚ್ಚರಿಕೆ ನೀಡಿ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>