<p><strong>ಕನಕಪುರ</strong>: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣವನ್ನು ಕನಕಪುರ ತಾಲ್ಲೂಕು ಬ್ರಾಹ್ಮಣರ ಸಂಘ ಖಂಡಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.</p>.<p>ಇಲ್ಲಿನ ಕೋಟೆ ರಾಮ ಮಂದಿರದಲ್ಲಿ ಬ್ರಾಹ್ಮಣರ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಅಧಿಕಾರಿಗಳ ನಡೆಯನ್ನು ಖಂಡಿಸಿದರು.</p>.<p>ಸಂಘದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಇತಿಹಾಸದಲ್ಲಿ ಎಂದೂ ಇಂತಹ ಘಟನೆ ನಡೆದಿಲ್ಲ. ಮುಸ್ಲಿಮರಿಗೆ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಲಾಗಿದೆ. ನಮಗೇಕೆ ಜನಿವಾರ ತೆಗೆಸಿದರು’ ಎಂದು ಕಿಡಿಕಾರಿದರು.</p>.<p>ಜನಿವಾರ ಕೇವಲ ಬ್ರಾಹ್ಮಣರು ತೊಡುವುದಿಲ್ಲ. ಆರ್ಯರು, ವೈಶ್ಯರು ತೊಡುತ್ತಾರೆ. ಪರೀಕ್ಷೆ ನೆಪದಲ್ಲಿ ಜನಿವಾರ ತೆಗೆಸಿರುವುದು ಈ ಮೂರು ಸಮುದಾಯದ ಜನರು ಮತ್ತು ನಂಬಿಕೆಗೆ ಮಾಡಿದ ಅಪಮಾನ ಎಂದರು.</p>.<p>ಬ್ರಾಹ್ಮಣ ಸಂಘದ ಪದಾಧಿಕಾರಿಗಳಾದ ಶಿವಶಂಕರ್, ಅಂಬಾಪ್ರಸಾದ್, ಉದಯಶಂಕರ್, ರವೀಂದ್ರ ಬಾಬು ಮಾತನಾಡಿ ಬ್ರಾಹ್ಮಣರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದರು.</p>.<p>ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳ ವಿರುದ್ಧ ಕ್ರಮಗೊಳ್ಳಬೇಕೆಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣವನ್ನು ಕನಕಪುರ ತಾಲ್ಲೂಕು ಬ್ರಾಹ್ಮಣರ ಸಂಘ ಖಂಡಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.</p>.<p>ಇಲ್ಲಿನ ಕೋಟೆ ರಾಮ ಮಂದಿರದಲ್ಲಿ ಬ್ರಾಹ್ಮಣರ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಅಧಿಕಾರಿಗಳ ನಡೆಯನ್ನು ಖಂಡಿಸಿದರು.</p>.<p>ಸಂಘದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಇತಿಹಾಸದಲ್ಲಿ ಎಂದೂ ಇಂತಹ ಘಟನೆ ನಡೆದಿಲ್ಲ. ಮುಸ್ಲಿಮರಿಗೆ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಲಾಗಿದೆ. ನಮಗೇಕೆ ಜನಿವಾರ ತೆಗೆಸಿದರು’ ಎಂದು ಕಿಡಿಕಾರಿದರು.</p>.<p>ಜನಿವಾರ ಕೇವಲ ಬ್ರಾಹ್ಮಣರು ತೊಡುವುದಿಲ್ಲ. ಆರ್ಯರು, ವೈಶ್ಯರು ತೊಡುತ್ತಾರೆ. ಪರೀಕ್ಷೆ ನೆಪದಲ್ಲಿ ಜನಿವಾರ ತೆಗೆಸಿರುವುದು ಈ ಮೂರು ಸಮುದಾಯದ ಜನರು ಮತ್ತು ನಂಬಿಕೆಗೆ ಮಾಡಿದ ಅಪಮಾನ ಎಂದರು.</p>.<p>ಬ್ರಾಹ್ಮಣ ಸಂಘದ ಪದಾಧಿಕಾರಿಗಳಾದ ಶಿವಶಂಕರ್, ಅಂಬಾಪ್ರಸಾದ್, ಉದಯಶಂಕರ್, ರವೀಂದ್ರ ಬಾಬು ಮಾತನಾಡಿ ಬ್ರಾಹ್ಮಣರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದರು.</p>.<p>ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳ ವಿರುದ್ಧ ಕ್ರಮಗೊಳ್ಳಬೇಕೆಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>