<p><strong>ಕನಕಪುರ</strong>: ಅಚ್ಚಲು ಸರ್ಕಾರಿ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.</p>.<p>ಈ ವೇಳೆ ಅಚ್ಚಲು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರೇಣುಕಾಂಬ ಮಾತನಾಡಿ, ಮಕ್ಕಳು ಕ್ರೀಡೆ ಜೊತೆಗೆ ಓದಿನಲ್ಲೂ ಉತ್ತಮ ಸಾಧನೆ ಮಾಡಿರುವುದು ಸಂತಸದ ವಿಷಯ. ಅಚ್ಚಲು ಶಾಲೆ ಕ್ರೀಡೆಗೆ ಹೆಸರಾಗಿದೆ. ಸರ್ಕಾರಿ ಶಾಲೆಯಾದರೂ ತಾಲ್ಲೂಕಿನಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ ಎಂದರು.</p>.<p>ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ, ರಾಜ್ಯಮಟ್ಟದ ವಾಲಿಬಾಲ್ ತಂಡದ ಆಟಗಾರ್ತಿಯರು ನಮ್ಮ ಶಾಲೆಯವರೇ ಆಗಿದ್ದು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.</p>.<p>ಕ್ರೀಡಾಪಟು ಶ್ರೀಕಾಂತ್ ಮಾತನಾಡಿ, ಶ್ರದ್ಧೆ ಮತ್ತು ಬದ್ಧತೆಯಿಂದ ನಾವು ಅಭ್ಯಾಸ ಮಾಡಿದರೆ ಖಂಡಿತವಾಗಿ ನಮ್ಮ ಗುರಿ ತಲುಪುತ್ತೇವೆ. ಓದಿನಲ್ಲಾಗಲಿ ಅಥವಾ ಕ್ರೀಡೆಯಲ್ಲಾಗಲಿ ನಮ್ಮ ಏಕಾಗ್ರತೆ ಮುಖ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಸತತವಾಗಿ 12 ವರ್ಷಗಳಿಂದ ಅಚ್ಚಲು ಹಾಗೂ ಸುತ್ತಮುತ್ತಲ ಶಾಲಾ ಮಕ್ಕಳಿಗೆ ಅಚ್ಚಲು ಶಾಲೆಯಲ್ಲಿ ಏರ್ಪಡಿಸುತ್ತಿರುವ ಕ್ರೀಡಾ ಬೇಸಿಗೆ ಶಿಬಿರದಿಂದ ನೂರಾರು ಮಕ್ಕಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಹೆಸರು ಮಾಡುವಂತಾಗಿದೆ ಎಂದರು.</p>.<p>ಪೊಲೀಸ್ ಇಲಾಖೆಯ ಗೋವಿಂದರಾಜು, ಶಿವಕುಮಾರ್, ನಂದೀಶ್, ಸತೀಶ್.ಕೆ.ಆರ್, ನಾಗರಾಜು.ಎಸ್, ಶಿಬಿರಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಅಚ್ಚಲು ಸರ್ಕಾರಿ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.</p>.<p>ಈ ವೇಳೆ ಅಚ್ಚಲು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರೇಣುಕಾಂಬ ಮಾತನಾಡಿ, ಮಕ್ಕಳು ಕ್ರೀಡೆ ಜೊತೆಗೆ ಓದಿನಲ್ಲೂ ಉತ್ತಮ ಸಾಧನೆ ಮಾಡಿರುವುದು ಸಂತಸದ ವಿಷಯ. ಅಚ್ಚಲು ಶಾಲೆ ಕ್ರೀಡೆಗೆ ಹೆಸರಾಗಿದೆ. ಸರ್ಕಾರಿ ಶಾಲೆಯಾದರೂ ತಾಲ್ಲೂಕಿನಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ ಎಂದರು.</p>.<p>ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ, ರಾಜ್ಯಮಟ್ಟದ ವಾಲಿಬಾಲ್ ತಂಡದ ಆಟಗಾರ್ತಿಯರು ನಮ್ಮ ಶಾಲೆಯವರೇ ಆಗಿದ್ದು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.</p>.<p>ಕ್ರೀಡಾಪಟು ಶ್ರೀಕಾಂತ್ ಮಾತನಾಡಿ, ಶ್ರದ್ಧೆ ಮತ್ತು ಬದ್ಧತೆಯಿಂದ ನಾವು ಅಭ್ಯಾಸ ಮಾಡಿದರೆ ಖಂಡಿತವಾಗಿ ನಮ್ಮ ಗುರಿ ತಲುಪುತ್ತೇವೆ. ಓದಿನಲ್ಲಾಗಲಿ ಅಥವಾ ಕ್ರೀಡೆಯಲ್ಲಾಗಲಿ ನಮ್ಮ ಏಕಾಗ್ರತೆ ಮುಖ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಸತತವಾಗಿ 12 ವರ್ಷಗಳಿಂದ ಅಚ್ಚಲು ಹಾಗೂ ಸುತ್ತಮುತ್ತಲ ಶಾಲಾ ಮಕ್ಕಳಿಗೆ ಅಚ್ಚಲು ಶಾಲೆಯಲ್ಲಿ ಏರ್ಪಡಿಸುತ್ತಿರುವ ಕ್ರೀಡಾ ಬೇಸಿಗೆ ಶಿಬಿರದಿಂದ ನೂರಾರು ಮಕ್ಕಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಹೆಸರು ಮಾಡುವಂತಾಗಿದೆ ಎಂದರು.</p>.<p>ಪೊಲೀಸ್ ಇಲಾಖೆಯ ಗೋವಿಂದರಾಜು, ಶಿವಕುಮಾರ್, ನಂದೀಶ್, ಸತೀಶ್.ಕೆ.ಆರ್, ನಾಗರಾಜು.ಎಸ್, ಶಿಬಿರಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>