<p><strong>ಕನಕಪುರ</strong>: ‘ನಗರದಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಿಕೊಡಬೇಕು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಅವರಿಗೆ ಒಕ್ಕಲಿಗ ಸಮುದಾಯದ ಮುಖಂಡರು ಮನವಿ ಮಾಡಿದರು.</p>.<p>ತಾಲ್ಲೂಕಿನ ಶಿವನಾಂಕರೇಶ್ವರ ದೇವಾಲಯದಲ್ಲಿ ಭಾನುವಾರ ಆಷಾಢ ಮಾಸ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ವಾಮೀಜಿ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಲಾಯಿತು.</p>.<p>‘ನಗರದಲ್ಲಿ ಒಕ್ಕಲಿಗರ ಸಂಘಕ್ಕೆ ಸೇರಿದ ಎರಡು ಎಕರೆಯಷ್ಟು ಭೂಮಿ ಇದೆ. ಅಲ್ಲಿ ಭವನ ನಿರ್ಮಿಸಿಕೊಡಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಕೋರಿದರು.</p>.<p>ಸ್ಥಳ ಪರಿಶೀಲಿಸಿ, ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ಸ್ವಾಮೀಜಿ ಭರವಸೆ ನೀಡಿದರು.</p>.<p>ಆದಿಚುಂಚನಗಿರಿ ಶಾಖಾ ಮಠದ ಅನ್ನದಾನನಾಥ ಸ್ವಾಮೀಜಿ, ಸಮುದಾಯದ ಮುಖಂಡರಾದ ಸಂಪತ್ ಕುಮಾರ್, ಬಸ್ ಸಿದ್ದರಾಜು, ಭಾನುಪ್ರಕಾಶ್, ಚೀರಣಕುಪ್ಪೆ ರಾಜೇಶ್, ಹರೀಶ್, ಚಿಕ್ಕೆಂಪೇಗೌಡ ಶಿವರಾಜು, ನಾಗರಾಜು ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ‘ನಗರದಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಿಕೊಡಬೇಕು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಅವರಿಗೆ ಒಕ್ಕಲಿಗ ಸಮುದಾಯದ ಮುಖಂಡರು ಮನವಿ ಮಾಡಿದರು.</p>.<p>ತಾಲ್ಲೂಕಿನ ಶಿವನಾಂಕರೇಶ್ವರ ದೇವಾಲಯದಲ್ಲಿ ಭಾನುವಾರ ಆಷಾಢ ಮಾಸ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ವಾಮೀಜಿ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಲಾಯಿತು.</p>.<p>‘ನಗರದಲ್ಲಿ ಒಕ್ಕಲಿಗರ ಸಂಘಕ್ಕೆ ಸೇರಿದ ಎರಡು ಎಕರೆಯಷ್ಟು ಭೂಮಿ ಇದೆ. ಅಲ್ಲಿ ಭವನ ನಿರ್ಮಿಸಿಕೊಡಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಕೋರಿದರು.</p>.<p>ಸ್ಥಳ ಪರಿಶೀಲಿಸಿ, ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ಸ್ವಾಮೀಜಿ ಭರವಸೆ ನೀಡಿದರು.</p>.<p>ಆದಿಚುಂಚನಗಿರಿ ಶಾಖಾ ಮಠದ ಅನ್ನದಾನನಾಥ ಸ್ವಾಮೀಜಿ, ಸಮುದಾಯದ ಮುಖಂಡರಾದ ಸಂಪತ್ ಕುಮಾರ್, ಬಸ್ ಸಿದ್ದರಾಜು, ಭಾನುಪ್ರಕಾಶ್, ಚೀರಣಕುಪ್ಪೆ ರಾಜೇಶ್, ಹರೀಶ್, ಚಿಕ್ಕೆಂಪೇಗೌಡ ಶಿವರಾಜು, ನಾಗರಾಜು ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>