<p>ಕನಕಪುರ: ಬೆಂಗಳೂರಿನಿಂದ ಶನಿವಾರ ರಾತ್ರಿ ಬೈಕ್ನಲ್ಲಿ ಕನಕಪುರಕ್ಕೆ ಬರುವಾಗ ಕುಮಾರಸ್ವಾಮಿ ಲೇಔಟ್ನಲ್ಲಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಕನಕಪುರದ ಉದಯ್ ಗೌಡ (27) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p>.<p>ಇವರು ನಗರದ ಎಸ್ ಕರಿಯಪ್ಪ ರಸ್ತೆಯ ನಿವಾಸಿ, ಉದಯ್ ಎಲೆಕ್ಟ್ರಿಕಲ್ ಮಾಲೀಕ ನಾಗೇಂದ್ರ ಪುತ್ರ. ಅವರಿಗೆ ತಾಯಿ ಮತ್ತು ಒಬ್ಬ ಸಹೋದರ ಇದ್ದಾರೆ. ಬಿ.ಇ ಪದವೀಧರರಾಗಿದ್ದು, ಬೆಂಗಳೂರಿನಲ್ಲಿ ಇಂಟೀರಿಯರ್ ಡೆಕೋರೇಷನ್ ಮತ್ತು ಬಿಲ್ಡಿಂಗ್ ಕನ್ಸ್ಟ್ರಕ್ಷನ್ ವಹಿವಾಟು ಮಾಡುತ್ತಿದ್ದರು.</p>.<p>ಶನಿವಾರ ರಾತ್ರಿ ಕೆಲಸ ಮುಗಿಸಿದ ನಂತರ ಸ್ನೇಹಿತರ ಜೊತೆ ಊಟ ಮಾಡಿಕೊಂಡು ಬೈಕ್ನಲ್ಲಿ ಕನಕಪುರಕ್ಕೆ ಬರುತ್ತಿದ್ದಾಗ ಕುಮಾರಸ್ವಾಮಿ ಲೇಔಟ್ ನಲ್ಲಿ ರಸ್ತೆಯಲ್ಲಿನ ಗುಂಡಿಗೆ ಸ್ಕೂಟರ್ ಬಿದ್ದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಕುಮಾರಸ್ವಾಮಿ ಲೇಔಟ್ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ವೈದ್ಯರ ಮನವಿ ಮೇರೆಗೆ ಪೋಷಕರು ಉದಯ್ ಗೌಡ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.ಬನ್ನಿ ಮುಕ್ಕೋಡ್ಲು ಗ್ರಾಮದಲ್ಲಿ ಮಂಗಳವಾರ ಅಂತ್ಯಸಂಸ್ಕಾರ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-14-2136213927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಬೆಂಗಳೂರಿನಿಂದ ಶನಿವಾರ ರಾತ್ರಿ ಬೈಕ್ನಲ್ಲಿ ಕನಕಪುರಕ್ಕೆ ಬರುವಾಗ ಕುಮಾರಸ್ವಾಮಿ ಲೇಔಟ್ನಲ್ಲಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಕನಕಪುರದ ಉದಯ್ ಗೌಡ (27) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p>.<p>ಇವರು ನಗರದ ಎಸ್ ಕರಿಯಪ್ಪ ರಸ್ತೆಯ ನಿವಾಸಿ, ಉದಯ್ ಎಲೆಕ್ಟ್ರಿಕಲ್ ಮಾಲೀಕ ನಾಗೇಂದ್ರ ಪುತ್ರ. ಅವರಿಗೆ ತಾಯಿ ಮತ್ತು ಒಬ್ಬ ಸಹೋದರ ಇದ್ದಾರೆ. ಬಿ.ಇ ಪದವೀಧರರಾಗಿದ್ದು, ಬೆಂಗಳೂರಿನಲ್ಲಿ ಇಂಟೀರಿಯರ್ ಡೆಕೋರೇಷನ್ ಮತ್ತು ಬಿಲ್ಡಿಂಗ್ ಕನ್ಸ್ಟ್ರಕ್ಷನ್ ವಹಿವಾಟು ಮಾಡುತ್ತಿದ್ದರು.</p>.<p>ಶನಿವಾರ ರಾತ್ರಿ ಕೆಲಸ ಮುಗಿಸಿದ ನಂತರ ಸ್ನೇಹಿತರ ಜೊತೆ ಊಟ ಮಾಡಿಕೊಂಡು ಬೈಕ್ನಲ್ಲಿ ಕನಕಪುರಕ್ಕೆ ಬರುತ್ತಿದ್ದಾಗ ಕುಮಾರಸ್ವಾಮಿ ಲೇಔಟ್ ನಲ್ಲಿ ರಸ್ತೆಯಲ್ಲಿನ ಗುಂಡಿಗೆ ಸ್ಕೂಟರ್ ಬಿದ್ದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಕುಮಾರಸ್ವಾಮಿ ಲೇಔಟ್ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ವೈದ್ಯರ ಮನವಿ ಮೇರೆಗೆ ಪೋಷಕರು ಉದಯ್ ಗೌಡ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.ಬನ್ನಿ ಮುಕ್ಕೋಡ್ಲು ಗ್ರಾಮದಲ್ಲಿ ಮಂಗಳವಾರ ಅಂತ್ಯಸಂಸ್ಕಾರ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-14-2136213927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>