<p><strong>ಕನಕಪುರ</strong>: ಕನಕಪುರ ನಗರಸಭೆ ಹೊಸ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಲಕ್ಷ್ಮಿದೇವಮ್ಮ ಮತ್ತು ಉಪಾಧ್ಯಕ್ಷರಾಗಿ ಸೈಯದ್ ಸಾದಿಕ್ ಅವಿರೋಧವಾಗಿ ಆಯ್ಕೆಯಾದರು.</p>.<p>ಕನಕಪುರ ಪುರಸಭೆಯು ನಗರಸಭೆಯಾಗಿ ಮೇಲ್ದರ್ಜೆಗೆ ಏರಿದ ನಂತರ ಆಯ್ಕೆಯಾದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಲಕ್ಷ್ಮಿದೇವಮ್ಮ ಪಾತ್ರರಾಗಿದ್ದಾರೆ.</p>.<p>ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನವು ಬಿಸಿಎಂ (ಎ) ಪ್ರವರ್ಗಕ್ಕೆ ಮೀಸಲಾಗಿತ್ತು. </p>.<p>ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಗೆ ವಾರ್ಡ್ ನಂಬರ್ 17 ಜೆ.ಸಿ ಬಡಾವಣೆಯ ಸದಸ್ಯೆ ಲಕ್ಷ್ಮಿದೇವಮ್ಮ ಮತ್ತು ವಾರ್ಡ್ ನಂಬರ್ 21 ಅಜೀಜ್ ನಗರದ ಸದಸ್ಯ ಸೈಯದ್ ಸಾದಿಕ್ ಬಿಟ್ಟು ಯಾರೂ ನಾಮಪತ್ರ ಸಲ್ಲಿಸಲಿಲ್ಲ. </p>.<p>ಚುನಾವಣಾ ಅಧಿಕಾರಿಯಾಗಿದ್ದ ರಾಮನಗರ ಜಿಲ್ಲಾ ಉಪ ವಿಭಾಗಾಧಿಕಾರಿ ಬಿ.ಕೆ.ಬಿನೋಯ್, ಇಬ್ಬರ ಅವಿರೋಧ ಆಯ್ಕೆ ಘೋಷಿಸಿದರು. ನಗರಸಭೆ ಕಮಿಷನರ್ ಎಂಎಸ್.ಮಹಾದೇವ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.</p>.<p>ನಗರಸಭೆಯ ಒಟ್ಟು 31 ಸದಸ್ಯರಲ್ಲಿ ಜೆಡಿಎಸ್ ಸದಸ್ಯ ಜೈರಾಮ್ ಗೈರು ಹಾಜರಾಗಿದ್ದರು. ಇನ್ನುಳಿದ 30 ಸದಸ್ಯರು ಭಾಗವಹಿಸಿದ್ದರು. ಕನಕಪುರ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಇದ್ದ ಕಾರಣ ಫಲಿತಾಂಶ ನಿಚ್ಚಳವಾಗಿತ್ತು. ಹಾಗಾಗಿ ಸಂಸದ ಮತ್ತು ಶಾಸಕರು ಮತದಾನ ಮಾಡಲು ಬಂದಿರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕನಕಪುರ ನಗರಸಭೆ ಹೊಸ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಲಕ್ಷ್ಮಿದೇವಮ್ಮ ಮತ್ತು ಉಪಾಧ್ಯಕ್ಷರಾಗಿ ಸೈಯದ್ ಸಾದಿಕ್ ಅವಿರೋಧವಾಗಿ ಆಯ್ಕೆಯಾದರು.</p>.<p>ಕನಕಪುರ ಪುರಸಭೆಯು ನಗರಸಭೆಯಾಗಿ ಮೇಲ್ದರ್ಜೆಗೆ ಏರಿದ ನಂತರ ಆಯ್ಕೆಯಾದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಲಕ್ಷ್ಮಿದೇವಮ್ಮ ಪಾತ್ರರಾಗಿದ್ದಾರೆ.</p>.<p>ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನವು ಬಿಸಿಎಂ (ಎ) ಪ್ರವರ್ಗಕ್ಕೆ ಮೀಸಲಾಗಿತ್ತು. </p>.<p>ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಗೆ ವಾರ್ಡ್ ನಂಬರ್ 17 ಜೆ.ಸಿ ಬಡಾವಣೆಯ ಸದಸ್ಯೆ ಲಕ್ಷ್ಮಿದೇವಮ್ಮ ಮತ್ತು ವಾರ್ಡ್ ನಂಬರ್ 21 ಅಜೀಜ್ ನಗರದ ಸದಸ್ಯ ಸೈಯದ್ ಸಾದಿಕ್ ಬಿಟ್ಟು ಯಾರೂ ನಾಮಪತ್ರ ಸಲ್ಲಿಸಲಿಲ್ಲ. </p>.<p>ಚುನಾವಣಾ ಅಧಿಕಾರಿಯಾಗಿದ್ದ ರಾಮನಗರ ಜಿಲ್ಲಾ ಉಪ ವಿಭಾಗಾಧಿಕಾರಿ ಬಿ.ಕೆ.ಬಿನೋಯ್, ಇಬ್ಬರ ಅವಿರೋಧ ಆಯ್ಕೆ ಘೋಷಿಸಿದರು. ನಗರಸಭೆ ಕಮಿಷನರ್ ಎಂಎಸ್.ಮಹಾದೇವ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.</p>.<p>ನಗರಸಭೆಯ ಒಟ್ಟು 31 ಸದಸ್ಯರಲ್ಲಿ ಜೆಡಿಎಸ್ ಸದಸ್ಯ ಜೈರಾಮ್ ಗೈರು ಹಾಜರಾಗಿದ್ದರು. ಇನ್ನುಳಿದ 30 ಸದಸ್ಯರು ಭಾಗವಹಿಸಿದ್ದರು. ಕನಕಪುರ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಇದ್ದ ಕಾರಣ ಫಲಿತಾಂಶ ನಿಚ್ಚಳವಾಗಿತ್ತು. ಹಾಗಾಗಿ ಸಂಸದ ಮತ್ತು ಶಾಸಕರು ಮತದಾನ ಮಾಡಲು ಬಂದಿರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>