ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಎಚ್‌ಡಿಕೆ - ಡಿಕೆಶಿ ಮುಖ್ಯಮಂತ್ರಿ ಆಸೆಗೆ ವೇದಿಕೆಯಾದ ಕರಗ ಮಹೋತ್ಸವ

Last Updated 20 ಜುಲೈ 2022, 7:37 IST
ಅಕ್ಷರ ಗಾತ್ರ

ರಾಮನಗರ: ಕರಗ ಮಹೋತ್ಸವ ಅಂಗವಾಗಿ ಇಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಗಳಲ್ಲಿ ಜಿಲ್ಲೆಯ ಇಬ್ಬರು ನಾಯಕರು ರಾಜ್ಯದ ಚುಕ್ಕಾಣಿ ಹಿಡಿಯಲು ಆಶೀರ್ವದಿಸುವಂತೆ ಜನರ ಮೊರೆ ಹೋದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ‘ಇಲ್ಲಿಂದ ಇನ್ನು ಯಾರು ಯಾರೋ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಜನತೆ ಅಂತಹವರನ್ನು ಬೆಂಬಲಿಸದೇ ನನಗೆ ಮತ್ತೆ ಆಶೀರ್ವಾದ’ನೀಡಬೇಕು ಎಂದು ಕೋರಿದರು.

ಅತ್ತ ಅರಳೀಮರ ವೃತ್ತದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ಈ ಹಿಂದೆ ಇಲ್ಲಿನ ಜನರು ದೇವೇಗೌಡರಿಗೆ , ಕುಮಾರಸ್ವಾಮಿಗೆ ಅವಕಾಶ ನೀಡಿದ್ದೀರಿ. ಈಗ ನನಗೂ ಅವಕಾಶ ಕೊಡಿ. ನನಗೆ ಹೂವಿನ ಹಾರ ಬೇಡ. ನಾನು ಇಲ್ಲಿ ಅಭ್ಯರ್ಥಿ ನಿಲ್ಲಿಸುತ್ತೇನೆ. ಅವರನ್ನು ವಿಧಾನಸೌಧಕ್ಕೆ ಕಳುಹಿಸಿಕೊಡಿ. ಅದೇ ನನಗೆ ಹೂವಿನ ಹಾರ’ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಹಂಬಲ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT