ರಾಮನಗರ: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಮನಗರ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾಗಿ ಚನ್ನಪಟ್ಟಣ ಕಿಶೋರ್, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಬಾಬು ಹಾಗೂ ಖಜಾಂಚಿಯಾಗಿ ಅನಂತ ಪದ್ಮನಾಭ (ಅನಂತು) ಅವರನ್ನು ಆಯ್ಕೆ ಮಾಡಲಾಗಿದೆ.
ನಗರದ ನಡೆದ ಸಭೆಯಲ್ಲಿ, ಜಿಲ್ಲೆಯ ಐದೂ ತಾಲ್ಲೂಕುಗಳಲ್ಲಿರುವ ಸಮುದಾಯದ ಮುಖಂಡರು, ಕರ್ನಾಟಕ ರಾಜ್ಯ ಸಮಗ್ರ ಬಲಿಜ ವೇದಿಕೆ ರಾಜ್ಯಾಧ್ಯಕ್ಷ ಎನ್.ಪಿ. ಮುನಿಕೃಷ್ಣ ಹಾಗೂ ಆಸ್ಪತ್ರೆ ವ್ಯವಸ್ಥಾಪಕ ಡಾ. ಶೇಖರ್ ಸುಬ್ಬಯ್ಯ ಅವರ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಡಾ. ಪ್ರಶಾಂತ್, ಬೆಂಗಳೂರಿನ ಶ್ರೀರಾಮುಲು ಹಾಗೂ ಸಂಘದ ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.