<p>ಕುದೂರು (ಮಾಗಡಿ): ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ವೀರಾಪುರ ಬಳಿ ಬಳಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಜಮೀನು ಅಳತೆ ಮಾಡಲು ತೆರಳಿದ್ದ ಗ್ರಾಮ ಲೆಕ್ಕಿಗ ಮತ್ತು ಸರ್ವೆ ಸಿಬ್ಬಂದಿ ಮೇಲೆ ಜಮೀನು ಮಾಲೀಕರು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.</p>.<p>ಹಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವೀರಾಪುರ ಜಮೀನೊಂದರ ನಕಾಶೆ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಕೆಯಾಗಿತ್ತು. ಜಾಗ ಪರಿಶೀಲನೆ ಹಾಗೂ ಅಳತೆಗೆ ಗ್ರಾಮ ಲೆಕ್ಕಿಗ ಹೊನ್ನಪ್ಪ ಮತ್ತು ಸರ್ವೆ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.</p>.<p>ಸಿಬ್ಬಂದಿ ಅಳತೆ ಮಾಡುವಾಗ ರಸ್ತೆ ಪಕ್ಕದ ಜಮೀನಿನ ಮಾಲೀಕರಾದ ಚಿಕ್ಕಯ್ಯನಪಾಳ್ಯದ ಜಯಮ್ಮ, ಅವರ ಪುತ್ರ ಮೋಹನ್ ಹಾಗೂ ಸಂಬಂಧಿಕರು ಗಲಾಟೆ ಆರಂಭಿಸಿದ್ದಾರೆ. ‘ಯಾವುದೇ ಪೂರ್ವ ತಿಳಿವಳಿಕೆ ಪತ್ರ (ನೋಟಿಸ್) ನೀಡಿಲ್ಲ’ ಎಂದು ಸಿಬ್ಬಂದಿ ಮೇಲೆ ಮುಗಿಬಿದ್ದಿದ್ದಾರೆ. ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.</p>.<p>ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕುದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-14-2127377048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದೂರು (ಮಾಗಡಿ): ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ವೀರಾಪುರ ಬಳಿ ಬಳಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಜಮೀನು ಅಳತೆ ಮಾಡಲು ತೆರಳಿದ್ದ ಗ್ರಾಮ ಲೆಕ್ಕಿಗ ಮತ್ತು ಸರ್ವೆ ಸಿಬ್ಬಂದಿ ಮೇಲೆ ಜಮೀನು ಮಾಲೀಕರು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.</p>.<p>ಹಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವೀರಾಪುರ ಜಮೀನೊಂದರ ನಕಾಶೆ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಕೆಯಾಗಿತ್ತು. ಜಾಗ ಪರಿಶೀಲನೆ ಹಾಗೂ ಅಳತೆಗೆ ಗ್ರಾಮ ಲೆಕ್ಕಿಗ ಹೊನ್ನಪ್ಪ ಮತ್ತು ಸರ್ವೆ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.</p>.<p>ಸಿಬ್ಬಂದಿ ಅಳತೆ ಮಾಡುವಾಗ ರಸ್ತೆ ಪಕ್ಕದ ಜಮೀನಿನ ಮಾಲೀಕರಾದ ಚಿಕ್ಕಯ್ಯನಪಾಳ್ಯದ ಜಯಮ್ಮ, ಅವರ ಪುತ್ರ ಮೋಹನ್ ಹಾಗೂ ಸಂಬಂಧಿಕರು ಗಲಾಟೆ ಆರಂಭಿಸಿದ್ದಾರೆ. ‘ಯಾವುದೇ ಪೂರ್ವ ತಿಳಿವಳಿಕೆ ಪತ್ರ (ನೋಟಿಸ್) ನೀಡಿಲ್ಲ’ ಎಂದು ಸಿಬ್ಬಂದಿ ಮೇಲೆ ಮುಗಿಬಿದ್ದಿದ್ದಾರೆ. ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.</p>.<p>ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡ ಗ್ರಾಮ ಲೆಕ್ಕಿಗ ಹೊನ್ನಪ್ಪ ಹಾಗೂ ಸರ್ವೆ ಸಿಬ್ಬಂದಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕುದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-14-2127377048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>