<p>ಬಿಡದಿ: ಕುದೂರು ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ನಕಲಿ ಚಿನ್ನದ ಹಗರಣ ಬಯಲಿಗೆ ತಂದಿದ್ದೇ ಶಾಸಕ ಬಾಲಕೃಷ್ಣ ಅವರ ಸಹೋದರ ಅಶೋಕ್ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವೈ.ಮಂಜು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕುದೂರು ಬಿಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸದ್ದು ಮಾಡುತ್ತಿದೆ. ಇದರಲ್ಲಿ ಶಾಸಕ ಬಾಲಕೃಷ್ಣ ಕುಟುಂಬದವರು ಭಾಗಿಯಾಗಿದ್ದಾರೆ ಎಂದು ಮಾಜಿ ಶಾಸಕ ಎ. ಮಂಜುನಾಥ್ ಆರೋಪಿಸುತ್ತಿದ್ದಾರೆ. ಈ ಆರೋಪದಲ್ಲಿ ಹುರುಳಿಲ್ಲ ಎಂದರು.</p>.<p>ಚಿನ್ನಾಭರಣಗಳ ಮೌಲ್ಯಮಾಪನ ಮಾಡಲು ಒಬ್ಬರನ್ನು ನೇಮಕ ಮಾಡಿಕೊಳ್ಳಬೇಕಿದೆ. ಕುದೂರು ಶಾಖೆಯಲ್ಲೂ ಒಬ್ಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆತ ನಕಲಿ ಚಿನ್ನದ ಹಗರಣದಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ ಎಂದರು.</p>.<p>ಮಾಜಿ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಆರೋಗ್ಯಕರ ಚರ್ಚೆ ಮಾಡಲಿ. ಇಲ್ಲ ಸಲ್ಲದ ಆರೋಪ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಚಂದ್ರಶೇಖರ್, ಜೀವನ್ ಬಾಬು, ಅಬ್ಬನಕುಪ್ಪೆ ರಮೇಶ್, ಮಹೇಶ್, ದೊಡ್ಡ ರೇವಯ್ಯ, ಮಧುಕುಮಾರ್, ಸಂತೋಷ್, ಬಾಲಕೃಷ್ಣ, ಶೋಭಾ, ಅನ್ನಪೂರ್ಣೇಶ್ವರಿ, ಯೋಗಾನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-14-431991072</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಕುದೂರು ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ನಕಲಿ ಚಿನ್ನದ ಹಗರಣ ಬಯಲಿಗೆ ತಂದಿದ್ದೇ ಶಾಸಕ ಬಾಲಕೃಷ್ಣ ಅವರ ಸಹೋದರ ಅಶೋಕ್ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ವೈ.ಮಂಜು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕುದೂರು ಬಿಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸದ್ದು ಮಾಡುತ್ತಿದೆ. ಇದರಲ್ಲಿ ಶಾಸಕ ಬಾಲಕೃಷ್ಣ ಕುಟುಂಬದವರು ಭಾಗಿಯಾಗಿದ್ದಾರೆ ಎಂದು ಮಾಜಿ ಶಾಸಕ ಎ. ಮಂಜುನಾಥ್ ಆರೋಪಿಸುತ್ತಿದ್ದಾರೆ. ಈ ಆರೋಪದಲ್ಲಿ ಹುರುಳಿಲ್ಲ ಎಂದರು.</p>.<p>ಚಿನ್ನಾಭರಣಗಳ ಮೌಲ್ಯಮಾಪನ ಮಾಡಲು ಒಬ್ಬರನ್ನು ನೇಮಕ ಮಾಡಿಕೊಳ್ಳಬೇಕಿದೆ. ಕುದೂರು ಶಾಖೆಯಲ್ಲೂ ಒಬ್ಬರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆತ ನಕಲಿ ಚಿನ್ನದ ಹಗರಣದಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ ಎಂದರು.</p>.<p>ಮಾಜಿ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಆರೋಗ್ಯಕರ ಚರ್ಚೆ ಮಾಡಲಿ. ಇಲ್ಲ ಸಲ್ಲದ ಆರೋಪ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಚಂದ್ರಶೇಖರ್, ಜೀವನ್ ಬಾಬು, ಅಬ್ಬನಕುಪ್ಪೆ ರಮೇಶ್, ಮಹೇಶ್, ದೊಡ್ಡ ರೇವಯ್ಯ, ಮಧುಕುಮಾರ್, ಸಂತೋಷ್, ಬಾಲಕೃಷ್ಣ, ಶೋಭಾ, ಅನ್ನಪೂರ್ಣೇಶ್ವರಿ, ಯೋಗಾನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-14-431991072</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>