<p>ರಾಮನಗರ: ‘ಶ್ರಮಿಕ ವರ್ಗವಾದ ಕಾರ್ಮಿಕರು ಸಂಘಟಿತರಾದಾಗ ಮಾತ್ರ ನ್ಯಾಯಯುತವಾದ ಹಕ್ಕುಗಳನ್ನು ಪಡೆಯಲು ಸಾಧ್ಯ. ಈ ದೇಶದ ಆರ್ಥಿಕತೆಯ ಚಕ್ರವನ್ನು ಮುನ್ನಡೆಸುವ ಕಾರ್ಮಿಕರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಸಹ ಅರಿತು ಒಗ್ಗಟ್ಟಾಗಬೇಕು. ’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.</p>.<p>ನಗರದ ಬಸ್ ನಿಲ್ದಾಣ ಸಮೀಪ ಶುಕ್ರವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅಸಂಘಟಿತ ವಲಯದ ಕಾರ್ಮಿಕರು ಸಂಘಟಿತರಾಗಬೇಕು. ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಆಹಾರ ವಿತರಿಸಲಾಯಿತು. ನಗರಸಭೆ ಸದಸ್ಯ ಸೋಮಶೇಖರ್ ಮಣಿ, ನಗರಸಭೆ ಅಧಿಕಾರಿ ನಟರಾಜ್, ಪೌರ ನೌಕರರ ಸಂಘದ ರಾಮನಗರ ಘಟಕದ ಅಧ್ಯಕ್ಷ ದೇವೇಂದ್ರ, ಮುಖಂಡ ದೇವು, ಕಟ್ಟಡ ನಿರ್ಮಾಣ ಕಾರ್ಮಿಕ ಮುಖಂಡರು ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-14-1397997815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಶ್ರಮಿಕ ವರ್ಗವಾದ ಕಾರ್ಮಿಕರು ಸಂಘಟಿತರಾದಾಗ ಮಾತ್ರ ನ್ಯಾಯಯುತವಾದ ಹಕ್ಕುಗಳನ್ನು ಪಡೆಯಲು ಸಾಧ್ಯ. ಈ ದೇಶದ ಆರ್ಥಿಕತೆಯ ಚಕ್ರವನ್ನು ಮುನ್ನಡೆಸುವ ಕಾರ್ಮಿಕರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಸಹ ಅರಿತು ಒಗ್ಗಟ್ಟಾಗಬೇಕು. ’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.</p>.<p>ನಗರದ ಬಸ್ ನಿಲ್ದಾಣ ಸಮೀಪ ಶುಕ್ರವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅಸಂಘಟಿತ ವಲಯದ ಕಾರ್ಮಿಕರು ಸಂಘಟಿತರಾಗಬೇಕು. ಸರ್ಕಾರದ ವಿವಿಧ ಸೌಲಭ್ಯ ಪಡೆದುಕೊಳ್ಳಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಆಹಾರ ವಿತರಿಸಲಾಯಿತು. ನಗರಸಭೆ ಸದಸ್ಯ ಸೋಮಶೇಖರ್ ಮಣಿ, ನಗರಸಭೆ ಅಧಿಕಾರಿ ನಟರಾಜ್, ಪೌರ ನೌಕರರ ಸಂಘದ ರಾಮನಗರ ಘಟಕದ ಅಧ್ಯಕ್ಷ ದೇವೇಂದ್ರ, ಮುಖಂಡ ದೇವು, ಕಟ್ಟಡ ನಿರ್ಮಾಣ ಕಾರ್ಮಿಕ ಮುಖಂಡರು ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-14-1397997815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>