ಮಾಗಡಿ: ಪಟ್ಟಣದ ಹೊಸಪೇಟೆ ಸರ್ಕಲ್ ಬಳಿ ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರಿಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದಾರೆ.
ಜೋಡುಗಟ್ಟೆ ನಿವಾಸಿ ನರಸಿಂಹಮೂರ್ತಿ(42) ಮೃತ. ಕಟ್ಟಡದ ಸೆಂಟ್ರಿಂಗ್ಗೆಕಾಂಕ್ರೀಟ್ ಹಾಕಲು ಕಬ್ಬಿಣ ಕಟ್ಟುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಗಿದೆ.