‘ಡಿಜಿಟಲ್ ಗ್ರಂಥಾಲಯಕ್ಕೆ ಒತ್ತು ನೀಡಿ’
‘ಪಂಚಾಯಿತಿ ಮಟ್ಟದಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಜಿಟಲ್ ಗ್ರಂಥಾಲಯ ಅಭಿವೃದ್ಧಿಗೂ ಒತ್ತು ನೀಡಬೇಕು. ರಿಜಿಸ್ಟರ್ಗಳಲ್ಲಿ ಮಕ್ಕಳ ಹೆಸರು ನೋಂದಣಿ ಮಾಡಬೇಕು. ಗ್ರಂಥಾಲಯಗಳ ಮಾಹಿತಿಯನ್ನು ಪಂಚತಂತ್ರ 2.O ತಂತ್ರಾಂಶದಲ್ಲಿ ಸೇರಿಸಬೇಕು. ಏನೇ ಸಮಸ್ಯೆ ಇದ್ದರೂ ಸಂಬಂಧಪಟ್ಟವರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು’ ಎಂದು ದಿಗ್ವಿಜಯ್ ಬೋಡ್ಕೆ ಹೇಳಿದರು. ಗ್ರಾಮ ಆರೋಗ್ಯ ಅಮೃತ ಅಭಿಯಾನ ಶಿಶುಪಾಲನಾ ಕೇಂದ್ರಗಳ ಸ್ಥಳ ಗುರುತಿಸುವಿಕೆ ಅಮೃತ್ ಗ್ರಾಮ ಪಂಚಾಯಿತಿಯ ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿ ಇ-ಸ್ವತ್ತು ಪಂಚತಂತ್ರ 2.o ತಂತ್ರಾಂಶ ದಿನವಹಿ ನಗದು ಪುಸ್ತಕ ಮಾಸಿಕ ಪುಸ್ತಕಗಳನ್ನು ಮುಕ್ತಾಯಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.