ನರೇಗಾ ಯೋಜನೆಯಡಿ ಜೆಸಿಬಿ ಬಳಸಿ ಕಟ್ಟೆಯ ಹೂಳೆತ್ತುವ ಕಾಮಗಾರಿ ನಡೆದಿದೆ. ದುರಸ್ತಿ ನೆಪದಲ್ಲಿ ಮಳೆಗಾಲದಲ್ಲಿ ಕಟ್ಟೆಯ ಮಣ್ಣನ್ನು ಇಟ್ಟಿಗೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಕೆಲಸ ಮಾಡಿಸಬೇಕಿತ್ತು. ಆದರೆ, ಅಧಿಕಾರಿಗಳು ಜೆಸಿಬಿ ಬಳಸಿ ಗ್ರಾಮಸ್ಥರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.