<p><strong>ರಾಮನಗರ</strong>: ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಳಕಮಲೆ ಗ್ರಾಮದಲ್ಲಿ ಹಣಕ್ಕಾಗಿ ಸಹೋದ್ಯೋಗಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.</p>.<p>ತರಳು ಗ್ರಾಮ ಪಂಚಾಯಿತಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಗುಳಕಮಲೆ ಗ್ರಾಮದ ಸಂದೀಪ ಶಿಕ್ಷೆಗೊಳಗಾದ ಅಪರಾಧ. ಪಂಚಾಯಿತಿಯ ಕಸದ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆನಂದ ಎಂಬುವರು ಹಲ್ಲೆಗೊಳಗಾಗಿದ್ದವರು.</p>.<p>2023ರ ಜುಲೈ 13ರಂದು ಆನಂದ ಅವರು ಕೆಲಸ ಮಾಡುತ್ತಿದ್ದಾಗ ಸಂದೀಪ ಹಣ ಕೊಡುವಂತೆ ತಾಕೀತು ಮಾಡಿದ್ದ. ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆನಂದ ಅವರು ಹಣ ಕೊಡಲು ನಿರಾಕರಿಸಿದಾಗ ಜಗಳವಾಡಿದ್ದ ಸಂದೀಪ್, ನಂತರ ಚಾಕುವಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ.</p>.<p>ಗಾಯಗೊಂಡಿದ್ದ ಆನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕಗ್ಗಲೀಪುರ ಠಾಣೆ ಪೊಲೀಸರು, ತನಿಖೆ ನಡೆಸಿ ಆರೋಪಿ ವಿರುದ್ದ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ್ದ ನ್ಯಾಯಾಧೀಶೆ ಗಿತಾ ಕೆ.ಬಿ ಅವರು ಸಂದೀಪನ ವಿರುದ್ದದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರ ಪರವಾಗಿ ವಿಶೇಷ ಸರ್ಕಾರಿ ವಕೀಲೆ ಮೀನಾಕುಮಾರಿ ವಾದ ಮಂಡಿಸಿದ್ದರು.</p>.<p><strong>ವಾಹನ ಕಳ್ಳನ ಬಂಧನ</strong></p><p> ಜಿಲ್ಲೆಯ ಬಿಡದಿ ಹೋಬಳಿಯ ಬೀಮೇನಹಳ್ಳಿ ಗ್ರಾಮದ ಬಳಿ ಇರುವ ಬೋಷೋಕು ಕಂಪನಿಯ ಮುಂಭಾಗದಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಟಾಟಾ ಎಸಿಇ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ₹7 ಲಕ್ಷ ಮೌಲ್ಯದ ಎರಡು ಕಾರು ಒಂದು ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಆಟೊ ವಶಪಡಿಸಿಕೊಂಡಿದ್ದಾರೆ. 600 ಗ್ರಾಂ ಗಾಂಜಾ ವಶ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಗನಹಟ್ಟಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಅವರಿಂದ ₹35 ಸಾವಿರ ಮೌಲ್ಯದ 600 ಗ್ರಾಂ ಗಾಂಜಾ ಮತ್ತು ₹500 ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಳಕಮಲೆ ಗ್ರಾಮದಲ್ಲಿ ಹಣಕ್ಕಾಗಿ ಸಹೋದ್ಯೋಗಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.</p>.<p>ತರಳು ಗ್ರಾಮ ಪಂಚಾಯಿತಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಗುಳಕಮಲೆ ಗ್ರಾಮದ ಸಂದೀಪ ಶಿಕ್ಷೆಗೊಳಗಾದ ಅಪರಾಧ. ಪಂಚಾಯಿತಿಯ ಕಸದ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆನಂದ ಎಂಬುವರು ಹಲ್ಲೆಗೊಳಗಾಗಿದ್ದವರು.</p>.<p>2023ರ ಜುಲೈ 13ರಂದು ಆನಂದ ಅವರು ಕೆಲಸ ಮಾಡುತ್ತಿದ್ದಾಗ ಸಂದೀಪ ಹಣ ಕೊಡುವಂತೆ ತಾಕೀತು ಮಾಡಿದ್ದ. ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆನಂದ ಅವರು ಹಣ ಕೊಡಲು ನಿರಾಕರಿಸಿದಾಗ ಜಗಳವಾಡಿದ್ದ ಸಂದೀಪ್, ನಂತರ ಚಾಕುವಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ.</p>.<p>ಗಾಯಗೊಂಡಿದ್ದ ಆನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕಗ್ಗಲೀಪುರ ಠಾಣೆ ಪೊಲೀಸರು, ತನಿಖೆ ನಡೆಸಿ ಆರೋಪಿ ವಿರುದ್ದ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ್ದ ನ್ಯಾಯಾಧೀಶೆ ಗಿತಾ ಕೆ.ಬಿ ಅವರು ಸಂದೀಪನ ವಿರುದ್ದದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರ ಪರವಾಗಿ ವಿಶೇಷ ಸರ್ಕಾರಿ ವಕೀಲೆ ಮೀನಾಕುಮಾರಿ ವಾದ ಮಂಡಿಸಿದ್ದರು.</p>.<p><strong>ವಾಹನ ಕಳ್ಳನ ಬಂಧನ</strong></p><p> ಜಿಲ್ಲೆಯ ಬಿಡದಿ ಹೋಬಳಿಯ ಬೀಮೇನಹಳ್ಳಿ ಗ್ರಾಮದ ಬಳಿ ಇರುವ ಬೋಷೋಕು ಕಂಪನಿಯ ಮುಂಭಾಗದಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಟಾಟಾ ಎಸಿಇ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ₹7 ಲಕ್ಷ ಮೌಲ್ಯದ ಎರಡು ಕಾರು ಒಂದು ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಆಟೊ ವಶಪಡಿಸಿಕೊಂಡಿದ್ದಾರೆ. 600 ಗ್ರಾಂ ಗಾಂಜಾ ವಶ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಗನಹಟ್ಟಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಅವರಿಂದ ₹35 ಸಾವಿರ ಮೌಲ್ಯದ 600 ಗ್ರಾಂ ಗಾಂಜಾ ಮತ್ತು ₹500 ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>