<p><strong>ರಾಮನಗರ:</strong> ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶನಿವಾರದಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಿಸಿದೆ. ಇಂದು ನಡೆದ ಪ್ರಥಮ ಭಾಷೆ ಕನ್ನಡದ ಪರೀಕ್ಷೆಗೆ 174 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಪರೀಕ್ಷೆಗೆ ಒಟ್ಟು 6,693 ಮಂದಿ ನೋಂದಣಿ ಮಾಡಿಕೊಂಡಿದ್ದರು. ಆ ಪೈಕಿ 6,692 ಮಂದಿ ಕನ್ನಡ ವಿಷಯ ಹಾಗೂ ಏಕೈಕ ವಿದ್ಯಾರ್ಥಿ ಅರೇಬಿಕ್ ವಿಷಯದವರಾಗಿದ್ದರು. ಕನ್ನಡದವರ ಪೈಕಿ 174 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು.</p>.<p>ಕನಕಪುರದ ಸರ್ಕಾರಿ ಪ್ರಥಮ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ. ದೊಡ್ಡಬೋರಯ್ಯ ಅವರು ಗುಲಾಬಿ ನೀಡುವ ಮೂಲಕ, ಪರೀಕ್ಷೆಗೆ ಶುಭ ಕೋರಿದರು.</p>.<p>‘ಮೊದಲ ದಿನದ ಪರೀಕ್ಷೆ ಜಿಲ್ಲೆಯಾದ್ಯಂತ ಸುಸೂತ್ರವಾಗಿ ನಡೆಯಿತು. ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಪರೀಕ್ಷೆ ಎದುರಿಸಿದರು. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಚನ್ನಾಗಿ ನಿರ್ವಹಣೆ ಮಾಡಿದ್ದಾರೆ’ ಎಂದು ಇಲಾಖೆಯ ಉಪ ನಿರ್ದೇಶಕ ಎಂ. ಮರಿಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ 14 ಕೇಂದ್ರಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೆ ಒಂದು ತಾಸು ಮುಂಚೆಯೇ ಬಂದು ಅಭ್ಯಾಸ ಮಾಡುತ್ತಿದ್ದರು. ಜೊತೆಗೆ ಪೋಷಕರು ಸಹ ತಮ್ಮ ಮಕ್ಕಳನ್ನು ಕರೆತಂದು ಜೊತೆಗಿದ್ದರು. ಪರೀಕ್ಷೆ ಮುಗಿಯುತ್ತಿದ್ದಂತೆ ಹೊರಗಡೆಯೇ ಕಾಯುತ್ತಿದ್ದ ಪೋಷಕರೊಂದಿಗೆ ವಿದ್ಯಾರ್ಥಿಗಳು ಮನೆಯತ್ತ ಹೆಜ್ಜೆ ಹಾಕಿದರು.</p>.<p>ಪರೀಕ್ಷೆಯ ಎರಡನೇ ವಿಷಯವಾದ ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಮನಃಶಾಸ್ತ್ರ ವಿಷಯದ ಪರೀಕ್ಷೆ <br />ಮಾರ್ಚ್ 2ರಂದು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶನಿವಾರದಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಿಸಿದೆ. ಇಂದು ನಡೆದ ಪ್ರಥಮ ಭಾಷೆ ಕನ್ನಡದ ಪರೀಕ್ಷೆಗೆ 174 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಪರೀಕ್ಷೆಗೆ ಒಟ್ಟು 6,693 ಮಂದಿ ನೋಂದಣಿ ಮಾಡಿಕೊಂಡಿದ್ದರು. ಆ ಪೈಕಿ 6,692 ಮಂದಿ ಕನ್ನಡ ವಿಷಯ ಹಾಗೂ ಏಕೈಕ ವಿದ್ಯಾರ್ಥಿ ಅರೇಬಿಕ್ ವಿಷಯದವರಾಗಿದ್ದರು. ಕನ್ನಡದವರ ಪೈಕಿ 174 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು.</p>.<p>ಕನಕಪುರದ ಸರ್ಕಾರಿ ಪ್ರಥಮ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ. ದೊಡ್ಡಬೋರಯ್ಯ ಅವರು ಗುಲಾಬಿ ನೀಡುವ ಮೂಲಕ, ಪರೀಕ್ಷೆಗೆ ಶುಭ ಕೋರಿದರು.</p>.<p>‘ಮೊದಲ ದಿನದ ಪರೀಕ್ಷೆ ಜಿಲ್ಲೆಯಾದ್ಯಂತ ಸುಸೂತ್ರವಾಗಿ ನಡೆಯಿತು. ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಪರೀಕ್ಷೆ ಎದುರಿಸಿದರು. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಚನ್ನಾಗಿ ನಿರ್ವಹಣೆ ಮಾಡಿದ್ದಾರೆ’ ಎಂದು ಇಲಾಖೆಯ ಉಪ ನಿರ್ದೇಶಕ ಎಂ. ಮರಿಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ 14 ಕೇಂದ್ರಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೆ ಒಂದು ತಾಸು ಮುಂಚೆಯೇ ಬಂದು ಅಭ್ಯಾಸ ಮಾಡುತ್ತಿದ್ದರು. ಜೊತೆಗೆ ಪೋಷಕರು ಸಹ ತಮ್ಮ ಮಕ್ಕಳನ್ನು ಕರೆತಂದು ಜೊತೆಗಿದ್ದರು. ಪರೀಕ್ಷೆ ಮುಗಿಯುತ್ತಿದ್ದಂತೆ ಹೊರಗಡೆಯೇ ಕಾಯುತ್ತಿದ್ದ ಪೋಷಕರೊಂದಿಗೆ ವಿದ್ಯಾರ್ಥಿಗಳು ಮನೆಯತ್ತ ಹೆಜ್ಜೆ ಹಾಕಿದರು.</p>.<p>ಪರೀಕ್ಷೆಯ ಎರಡನೇ ವಿಷಯವಾದ ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಮನಃಶಾಸ್ತ್ರ ವಿಷಯದ ಪರೀಕ್ಷೆ <br />ಮಾರ್ಚ್ 2ರಂದು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>