<p><strong>ಕನಕಪುರ</strong>: ತಾಲ್ಲೂಕಿನ ನಲ್ಲಹಳ್ಳಿ ನುಸಿಪೀಡೆ ಬಾಧಿತ ತೆಂಗಿನ ತೋಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಲ್ಲಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ತೆಂಗಿನ ಮರಗಳಿಗೆ ನುಸಿಪೀಡೆ ರೋಗ ಕೆಲವು ವರ್ಷಗಳಿಂದ ಕಾಣಿಸಿಕೊಂಡಿದೆ. ಬಹುತೇಕ ತೆಂಗಿನ ಮರಗಳ ಸುಳಿ ಒಣಗಿ ನಾಶವಾಗುತ್ತಿದೆ. ರೋಗಕ್ಕೆ ಸಾವಿರಾರು ಎಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೆಂಗಿನ ಮರಗಳು ತುತ್ತಾಗಿವೆ. ಇದರಿಂದ ನೂರಾರು ರೈತರು ತೊಂದರೆಗೆ ಈಡಾಗಿದ್ದಾರೆ.</p>.<p> ಜಿಲ್ಲಾ ಸಚಿವರ ಎದುರು ರೈತರು ತಮ್ಮ ಅಳಲು ತೋಡಿಕೊಂಡರು. ಈ ಭಾಗದಲ್ಲಿ ತೆಂಗಿನ ಮರಗಳ ಜತೆಗೆ ಅಡಿಕೆ ಮರಗಳಿಗೂ ರೋಗ ಹರಡುತ್ತಿದೆ. ಹೀಗೆ ಮುಂದುವರಿದರೆ ತೆಂಗಿನ ತೋಟಗಳು ಸಂಪೂರ್ಣ ನಾಶವಾಗಲಿವೆ ಎಂದು ಸಚಿವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟರು.</p>.<p>ರೈತರ ಮನವಿ ಆಲಿಸಿದ ಸಚಿವರು, ಕೃಷಿ ಇಲಾಖೆ ಸಚಿವರೊಂದಿಗೆ ಚರ್ಚಿಸಿ ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ರವಿ, ಶಾಸಕ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಸಿಇಒ ದಿಗ್ವಿಜಯ ಬೋಡ್ಕೆ, ತಹಶೀಲ್ದಾರ್ ಸ್ಮಿತಾ ರಾಮ್, ಇಒ ಭೈರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ತಾಲ್ಲೂಕಿನ ನಲ್ಲಹಳ್ಳಿ ನುಸಿಪೀಡೆ ಬಾಧಿತ ತೆಂಗಿನ ತೋಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಲ್ಲಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ತೆಂಗಿನ ಮರಗಳಿಗೆ ನುಸಿಪೀಡೆ ರೋಗ ಕೆಲವು ವರ್ಷಗಳಿಂದ ಕಾಣಿಸಿಕೊಂಡಿದೆ. ಬಹುತೇಕ ತೆಂಗಿನ ಮರಗಳ ಸುಳಿ ಒಣಗಿ ನಾಶವಾಗುತ್ತಿದೆ. ರೋಗಕ್ಕೆ ಸಾವಿರಾರು ಎಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೆಂಗಿನ ಮರಗಳು ತುತ್ತಾಗಿವೆ. ಇದರಿಂದ ನೂರಾರು ರೈತರು ತೊಂದರೆಗೆ ಈಡಾಗಿದ್ದಾರೆ.</p>.<p> ಜಿಲ್ಲಾ ಸಚಿವರ ಎದುರು ರೈತರು ತಮ್ಮ ಅಳಲು ತೋಡಿಕೊಂಡರು. ಈ ಭಾಗದಲ್ಲಿ ತೆಂಗಿನ ಮರಗಳ ಜತೆಗೆ ಅಡಿಕೆ ಮರಗಳಿಗೂ ರೋಗ ಹರಡುತ್ತಿದೆ. ಹೀಗೆ ಮುಂದುವರಿದರೆ ತೆಂಗಿನ ತೋಟಗಳು ಸಂಪೂರ್ಣ ನಾಶವಾಗಲಿವೆ ಎಂದು ಸಚಿವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟರು.</p>.<p>ರೈತರ ಮನವಿ ಆಲಿಸಿದ ಸಚಿವರು, ಕೃಷಿ ಇಲಾಖೆ ಸಚಿವರೊಂದಿಗೆ ಚರ್ಚಿಸಿ ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ರವಿ, ಶಾಸಕ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಸಿಇಒ ದಿಗ್ವಿಜಯ ಬೋಡ್ಕೆ, ತಹಶೀಲ್ದಾರ್ ಸ್ಮಿತಾ ರಾಮ್, ಇಒ ಭೈರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>