<p><strong>ರಾಮನಗರ:</strong> ಜಗತ್ತನ್ನೇ ಕಾಡಿದ ಕೋವಿಡ್ ವೈರಸ್ಗೆ ಪ್ರತಿರೋಧಕವಾಗಿ ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲೆಯಾದ್ಯಂತ ಚಾಲನೆ ದೊರೆಯಲಿದೆ.</p>.<p>ಮೊದಲ ಹಂತದಲ್ಲಿ ಆರೋಗ್ಯ ವಲಯದಲ್ಲಿ ಶ್ರಮಿಸುತ್ತಿರುವ 8405 ಮಂದಿಗೆ ಈ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಒಟ್ಟು 107 ಸೆಷನ್ ನಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನದಂದು 800 ಕೊರೊನಾ ವಾರಿಯರ್ಗಳು ಈ ಲಸಿಕೆ ಪಡೆಯಲಿದ್ದಾರೆ.ಎಲ್ಲೆಲ್ಲಿ: ಜಿಲ್ಲಾಸ್ಪತ್ರೆ, ರಾಮಕೃಷ್ಣ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆ, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ, ಕನಕಪುರ ಮೆಟರ್ ನಿಟಿ ಆಸ್ಪತ್ರೆ, ಮಾಗಡಿ ತಾಲ್ಲೂಕು ಆಸ್ಪತ್ರೆ, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಲಸಿಕೆ ಹಾಕಲು ಗುರುತಿಸಲಾಗಿದೆ. ಪ್ರತಿ ಕೇಂದ್ರಕ್ಕೆ 5 ವ್ಯಾಕ್ಸಿನೇಟರ್ ಗಳನ್ನು ನೇಮಕ ಮಾಡಲಾಗಿದೆ.</p>.<p><strong>ಲಸಿಕೆಗೆ ಸ್ವಾಗತ: </strong>ಜಿಲ್ಲೆಗೆ ಶುಕ್ರವಾರ ಬೆಳಿಗ್ಗೆ ಬಂದ 5 ಸಾವಿರ ಕೋವಿಡ್ ಲಸಿಕೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಬರಮಾಡಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ಪದ್ಮಾ ಉಪಸ್ಥಿತರಿದ್ದರು.</p>.<p><strong>ಹೀಗಿರಲಿದೆ ಪ್ರಕ್ರಿಯೆ</strong></p>.<p>ಇಂಜೆಕ್ಷನ್ ರೂಪದಲ್ಲಿ ಲಸಿಕೆಯನ್ನು ನೀಡಲಾಗುವುದು. ಇಂಜೆಕ್ಷನ್ ತೆಗೆದುಕೊಳ್ಳಲು ತೆರಳುವ ವ್ಯಕ್ತಿಯನ್ನು ಮೊದಲಿಗೆ ನೋಂದಣಿ ಮಾಡಿಕೊಂಡು, ದೇಹದ ಉಷ್ಣಾಂಶ ಪರೀಕ್ಷೆ ತಪಾಸಣೆ ಮಾಡಲಾಗುವುದು. ನಂತರ ಸುಮಾರು 0.5 ಎಂ.ಎಲ್. ಅಷ್ಟು ಇಂಜೆಕ್ಷನ್ ನೀಡಲಾಗುವುದು. ಇದನ್ನು ನೀಡಿದ ಅರ್ಧ ಗಂಟೆತನಕ ಆ ವ್ಯಕ್ತಿ ಕೇಂದ್ರದಲ್ಲಿಯೇ ಇರಬೇಕು. ಆರೋಗ್ಯದಲ್ಲಿ ಏನಾದರೂ ಏರುಪೇರು ಕಂಡುಬಂದಲ್ಲಿ ಕೂಡಲೇ ಅಂತಹವರನ್ನು ಉಪಚರಿಸಲು ಕ್ರಮ ಕೈಗೊಳ್ಳಲಾಗುವುದು. 28 ದಿನಗಳ ತರುವಾಯ ಅದೇ ವ್ಯಕ್ತಿಗೆ ಮತ್ತೊಂದು ಸುತ್ತಿನ ಲಸಿಕೆ ನೀಡಲಾಗುವುದು.</p>.<p><strong>ತಾಲ್ಲೂಕುವಾರು ಲಸಿಕೆ ಪಡೆಯುವವರ ಸಂಖ್ಯೆ</strong></p>.<p>ತಾಲ್ಲೂಕು: ಸಂಖ್ಯೆ</p>.<p>ರಾಮನಗರ; 3161</p>.<p>ಚನ್ನಪಟ್ಟಣ; 1633</p>.<p>ಮಾಗಡಿ; 1601</p>.<p>ಕನಕಪುರ; 2010</p>.<p>***</p>.<p>ಶನಿವಾರದಿಂದ ಜಿಲ್ಲೆಯ 8 ಕೇಂದ್ರಗಳಲ್ಲಿ ಲಸಿಕೆ ಕಾರ್ಯ ಆರಂಭ ಆಗಲಿದೆ. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ</p>.<p><strong>-ಎಂ.ಎಸ್. ಅರ್ಚನಾ,ಜಿಲ್ಲಾಧಿಕಾರಿ, ರಾಮನಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಜಗತ್ತನ್ನೇ ಕಾಡಿದ ಕೋವಿಡ್ ವೈರಸ್ಗೆ ಪ್ರತಿರೋಧಕವಾಗಿ ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲೆಯಾದ್ಯಂತ ಚಾಲನೆ ದೊರೆಯಲಿದೆ.</p>.<p>ಮೊದಲ ಹಂತದಲ್ಲಿ ಆರೋಗ್ಯ ವಲಯದಲ್ಲಿ ಶ್ರಮಿಸುತ್ತಿರುವ 8405 ಮಂದಿಗೆ ಈ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಒಟ್ಟು 107 ಸೆಷನ್ ನಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನದಂದು 800 ಕೊರೊನಾ ವಾರಿಯರ್ಗಳು ಈ ಲಸಿಕೆ ಪಡೆಯಲಿದ್ದಾರೆ.ಎಲ್ಲೆಲ್ಲಿ: ಜಿಲ್ಲಾಸ್ಪತ್ರೆ, ರಾಮಕೃಷ್ಣ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆ, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ, ಕನಕಪುರ ಮೆಟರ್ ನಿಟಿ ಆಸ್ಪತ್ರೆ, ಮಾಗಡಿ ತಾಲ್ಲೂಕು ಆಸ್ಪತ್ರೆ, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಲಸಿಕೆ ಹಾಕಲು ಗುರುತಿಸಲಾಗಿದೆ. ಪ್ರತಿ ಕೇಂದ್ರಕ್ಕೆ 5 ವ್ಯಾಕ್ಸಿನೇಟರ್ ಗಳನ್ನು ನೇಮಕ ಮಾಡಲಾಗಿದೆ.</p>.<p><strong>ಲಸಿಕೆಗೆ ಸ್ವಾಗತ: </strong>ಜಿಲ್ಲೆಗೆ ಶುಕ್ರವಾರ ಬೆಳಿಗ್ಗೆ ಬಂದ 5 ಸಾವಿರ ಕೋವಿಡ್ ಲಸಿಕೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಬರಮಾಡಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ಪದ್ಮಾ ಉಪಸ್ಥಿತರಿದ್ದರು.</p>.<p><strong>ಹೀಗಿರಲಿದೆ ಪ್ರಕ್ರಿಯೆ</strong></p>.<p>ಇಂಜೆಕ್ಷನ್ ರೂಪದಲ್ಲಿ ಲಸಿಕೆಯನ್ನು ನೀಡಲಾಗುವುದು. ಇಂಜೆಕ್ಷನ್ ತೆಗೆದುಕೊಳ್ಳಲು ತೆರಳುವ ವ್ಯಕ್ತಿಯನ್ನು ಮೊದಲಿಗೆ ನೋಂದಣಿ ಮಾಡಿಕೊಂಡು, ದೇಹದ ಉಷ್ಣಾಂಶ ಪರೀಕ್ಷೆ ತಪಾಸಣೆ ಮಾಡಲಾಗುವುದು. ನಂತರ ಸುಮಾರು 0.5 ಎಂ.ಎಲ್. ಅಷ್ಟು ಇಂಜೆಕ್ಷನ್ ನೀಡಲಾಗುವುದು. ಇದನ್ನು ನೀಡಿದ ಅರ್ಧ ಗಂಟೆತನಕ ಆ ವ್ಯಕ್ತಿ ಕೇಂದ್ರದಲ್ಲಿಯೇ ಇರಬೇಕು. ಆರೋಗ್ಯದಲ್ಲಿ ಏನಾದರೂ ಏರುಪೇರು ಕಂಡುಬಂದಲ್ಲಿ ಕೂಡಲೇ ಅಂತಹವರನ್ನು ಉಪಚರಿಸಲು ಕ್ರಮ ಕೈಗೊಳ್ಳಲಾಗುವುದು. 28 ದಿನಗಳ ತರುವಾಯ ಅದೇ ವ್ಯಕ್ತಿಗೆ ಮತ್ತೊಂದು ಸುತ್ತಿನ ಲಸಿಕೆ ನೀಡಲಾಗುವುದು.</p>.<p><strong>ತಾಲ್ಲೂಕುವಾರು ಲಸಿಕೆ ಪಡೆಯುವವರ ಸಂಖ್ಯೆ</strong></p>.<p>ತಾಲ್ಲೂಕು: ಸಂಖ್ಯೆ</p>.<p>ರಾಮನಗರ; 3161</p>.<p>ಚನ್ನಪಟ್ಟಣ; 1633</p>.<p>ಮಾಗಡಿ; 1601</p>.<p>ಕನಕಪುರ; 2010</p>.<p>***</p>.<p>ಶನಿವಾರದಿಂದ ಜಿಲ್ಲೆಯ 8 ಕೇಂದ್ರಗಳಲ್ಲಿ ಲಸಿಕೆ ಕಾರ್ಯ ಆರಂಭ ಆಗಲಿದೆ. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ</p>.<p><strong>-ಎಂ.ಎಸ್. ಅರ್ಚನಾ,ಜಿಲ್ಲಾಧಿಕಾರಿ, ರಾಮನಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>