<p><strong>ರಾಮನಗರ:</strong> ನಗರದ ಛತ್ರದ ಬೀದಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗದಲ್ಲಿ ₹19 ಲಕ್ಷ ವೆಚ್ಚದಲ್ಲಿ 180 ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ರಥ ಸಾಗುವ ಛತ್ರದ ಬೀದಿ ದಾರಿಯ ಅಭಿವೃದ್ಧಿ ಅಪೂರ್ಣವಾಗಿತ್ತು. ಈ ಭಾಗದಲ್ಲಿ ಶ್ರೀರಾಮ, ಆಂಜನೇಯ ಸ್ವಾಮಿ ಹಾಗೂ ರಾಘವೇಂದ್ರ ಸ್ವಾಮಿ ಸೇರಿ ಮೂರು ಪ್ರಮುಖ ದೇವಾಲಯಗಳಿವೆ. ಇಲ್ಲಿಗೆ ಬರುವ ಭಕ್ತರು ಹಾಗೂ ಸಾರ್ವಜನಿಕರ ಸಂಚಾರ, ವಾಹನ ಸಂಚಾರಕ್ಕೂ ಬಹಳ ತೊಂದರೆಯಾಗಿತ್ತು’ ಎಂದರು.</p>.<p>‘ಈ ಭಾಗದ ಜನರು ರಸ್ತೆ ಅಭಿವೃದ್ದಿ ಕಾಮಗಾರಿಗೆ ಹಿಂದಿನಿಂದಲೂ ಒತ್ತಾಯ ಮಾಡುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಗರಸಭೆ ನಿಧಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.</p>.<p>‘ನಗರದ ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಸ ಎಸೆಯುತ್ತಿದ್ದಾರೆ. ವಿದ್ಯಾವಂತರೇ ವಾಹನದಲ್ಲಿ ಕಸ ತಂದು ಹಾಕುತ್ತಿದ್ದಾರೆ. ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ನಗರಸಭೆಯು ರಾಯಭಾರಿಯನ್ನು ನೇಮಕ ಮಾಡಿದೆ. ಶಾಲಾ-ಕಾಲೇಜುಗಳು ಮತ್ತು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬಿಬಿಎಂಪಿಯಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ ವಹಿಸುವಂತೆ ನಮ್ಮ ನಗರಸಭೆ ವ್ಯಾಪ್ತಿಯಲ್ಲಿಯೂ ಸಹ ಕ್ರಮ ವಹಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷೆ ಆಯಿಷಾ ಬಾನು, ಸದಸ್ಯರಾದ ಮಹಾಲಕ್ಷ್ಮಿ ಗೂಳಿಗೌಡ, ಸೋಮಶೇಖರ್ (ಮಣಿ), ಅಜ್ಮತ್, ಮುಖಂಡರಾದ ನಾರಾಯಣಪ್ಪ, ಹಾಲಿನ ಚಂದ್ರು, ಗಿರಿಜಮ್ಮ, ರಾಜು, ನಗರಸಭೆ ಎಇಇ ವಿಶ್ವನಾಥ್, ಎಂಜಿನಿಯರ್ ಪವಿತ್ರ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಗರದ ಛತ್ರದ ಬೀದಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗದಲ್ಲಿ ₹19 ಲಕ್ಷ ವೆಚ್ಚದಲ್ಲಿ 180 ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ರಥ ಸಾಗುವ ಛತ್ರದ ಬೀದಿ ದಾರಿಯ ಅಭಿವೃದ್ಧಿ ಅಪೂರ್ಣವಾಗಿತ್ತು. ಈ ಭಾಗದಲ್ಲಿ ಶ್ರೀರಾಮ, ಆಂಜನೇಯ ಸ್ವಾಮಿ ಹಾಗೂ ರಾಘವೇಂದ್ರ ಸ್ವಾಮಿ ಸೇರಿ ಮೂರು ಪ್ರಮುಖ ದೇವಾಲಯಗಳಿವೆ. ಇಲ್ಲಿಗೆ ಬರುವ ಭಕ್ತರು ಹಾಗೂ ಸಾರ್ವಜನಿಕರ ಸಂಚಾರ, ವಾಹನ ಸಂಚಾರಕ್ಕೂ ಬಹಳ ತೊಂದರೆಯಾಗಿತ್ತು’ ಎಂದರು.</p>.<p>‘ಈ ಭಾಗದ ಜನರು ರಸ್ತೆ ಅಭಿವೃದ್ದಿ ಕಾಮಗಾರಿಗೆ ಹಿಂದಿನಿಂದಲೂ ಒತ್ತಾಯ ಮಾಡುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಗರಸಭೆ ನಿಧಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.</p>.<p>‘ನಗರದ ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಸ ಎಸೆಯುತ್ತಿದ್ದಾರೆ. ವಿದ್ಯಾವಂತರೇ ವಾಹನದಲ್ಲಿ ಕಸ ತಂದು ಹಾಕುತ್ತಿದ್ದಾರೆ. ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ನಗರಸಭೆಯು ರಾಯಭಾರಿಯನ್ನು ನೇಮಕ ಮಾಡಿದೆ. ಶಾಲಾ-ಕಾಲೇಜುಗಳು ಮತ್ತು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬಿಬಿಎಂಪಿಯಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ ವಹಿಸುವಂತೆ ನಮ್ಮ ನಗರಸಭೆ ವ್ಯಾಪ್ತಿಯಲ್ಲಿಯೂ ಸಹ ಕ್ರಮ ವಹಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷೆ ಆಯಿಷಾ ಬಾನು, ಸದಸ್ಯರಾದ ಮಹಾಲಕ್ಷ್ಮಿ ಗೂಳಿಗೌಡ, ಸೋಮಶೇಖರ್ (ಮಣಿ), ಅಜ್ಮತ್, ಮುಖಂಡರಾದ ನಾರಾಯಣಪ್ಪ, ಹಾಲಿನ ಚಂದ್ರು, ಗಿರಿಜಮ್ಮ, ರಾಜು, ನಗರಸಭೆ ಎಇಇ ವಿಶ್ವನಾಥ್, ಎಂಜಿನಿಯರ್ ಪವಿತ್ರ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>