<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮದ ಮೂರು ಮಂದಿಗೆ ಬುಧವಾರ ಕೋವಿಡ್-19 ದೃಢವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಗ್ರಾಮಕ್ಕೆ ತೆರಳಿ ಯಾರೂ ಬಾರದಂತೆ ಸೀಲ್ ಡೌನ್ ಮಾಡಿದರು.</p>.<p>ಈ ಮೊದಲು ಗ್ರಾಮದ ಒಬ್ಬ ಯುವಕನಿಗೆ ಕೋವಿಡ್ 19 ದೃಢಪಟ್ಟಿತ್ತು. ಆತನ ಸಂಪರ್ಕದಲ್ಲಿದ್ದ 24 ಮಂದಿಯನ್ನು ಕ್ವಾರಂಟೈನ್ನಲ್ಲಿಇಡಲಾಗಿತ್ತು. ಅವರಲ್ಲಿ ಮತ್ತೆ ಮೂರು ಮಂದಿಗೆ ಬುಧವಾರ ಕೋವಿಡ್ ದೃಢಪಟ್ಟಿರುವುದು ಖಚಿತವಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಂಜೆ ಬಂದ ಅಧಿಕಾರಿಗಳ ತಂಡ ಸೀಲ್ ಡೌನ್ ಮಾಡಿದರು. ಈ ಮೊದಲು ಯುವಕನಿಗೆ ಕೋವಿಡ್ ದೃಢಪಟ್ಟಿದ್ದ ವೇಳೆಯಲ್ಲಿಯೂ ಸೀಲ್ ಡೌನ್ ಮಾಡಲಾಗಿತ್ತು. ಆನಂತರ ತೆರವು ಮಾಡಲಾಗಿತ್ತು.</p>.<p>ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಿಗೆ ಮರದ ತುಂಡುಗಳನ್ನು ಇಟ್ಟು ರಸ್ತೆಗಳನ್ನು ಬಂದ್ ಮಾಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಬರಬಾರದು ಹಾಗೂ ಇತರೆಡೆಯಿಂದ ಗ್ರಾಮಕ್ಕೆ ಯಾರೂ ಬರಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಈ ಭಾಗದಲ್ಲಿ ಈಗ ಕೋವಿಡ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮದ ಮೂರು ಮಂದಿಗೆ ಬುಧವಾರ ಕೋವಿಡ್-19 ದೃಢವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಗ್ರಾಮಕ್ಕೆ ತೆರಳಿ ಯಾರೂ ಬಾರದಂತೆ ಸೀಲ್ ಡೌನ್ ಮಾಡಿದರು.</p>.<p>ಈ ಮೊದಲು ಗ್ರಾಮದ ಒಬ್ಬ ಯುವಕನಿಗೆ ಕೋವಿಡ್ 19 ದೃಢಪಟ್ಟಿತ್ತು. ಆತನ ಸಂಪರ್ಕದಲ್ಲಿದ್ದ 24 ಮಂದಿಯನ್ನು ಕ್ವಾರಂಟೈನ್ನಲ್ಲಿಇಡಲಾಗಿತ್ತು. ಅವರಲ್ಲಿ ಮತ್ತೆ ಮೂರು ಮಂದಿಗೆ ಬುಧವಾರ ಕೋವಿಡ್ ದೃಢಪಟ್ಟಿರುವುದು ಖಚಿತವಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಂಜೆ ಬಂದ ಅಧಿಕಾರಿಗಳ ತಂಡ ಸೀಲ್ ಡೌನ್ ಮಾಡಿದರು. ಈ ಮೊದಲು ಯುವಕನಿಗೆ ಕೋವಿಡ್ ದೃಢಪಟ್ಟಿದ್ದ ವೇಳೆಯಲ್ಲಿಯೂ ಸೀಲ್ ಡೌನ್ ಮಾಡಲಾಗಿತ್ತು. ಆನಂತರ ತೆರವು ಮಾಡಲಾಗಿತ್ತು.</p>.<p>ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಿಗೆ ಮರದ ತುಂಡುಗಳನ್ನು ಇಟ್ಟು ರಸ್ತೆಗಳನ್ನು ಬಂದ್ ಮಾಡಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಬರಬಾರದು ಹಾಗೂ ಇತರೆಡೆಯಿಂದ ಗ್ರಾಮಕ್ಕೆ ಯಾರೂ ಬರಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಈ ಭಾಗದಲ್ಲಿ ಈಗ ಕೋವಿಡ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>