ವಿರೂಪಾಕ್ಷಪ್ಪ ತಂದಿದ್ದ ರೇಷ್ಮೆಗೂಡು ಆನ್ಲೈನ್ ಹರಾಜಿನಲ್ಲಿ ಪ್ರತಿ ಕೆ.ಜಿ.ಗೆ ₹550 ದರದಲ್ಲಿ ಮಾರಾಟ ಆಗಿತ್ತು. ಈ ಹರಾಜು ಪಡೆದಿದ್ದ ರೀಲರ್ ರೈತನ ಬಳಿ ಬಂದು ‘ನಾನು ತಪ್ಪಾಗಿ ಪ್ರತಿ ಕೆ.ಜಿ.ಗೆ ₹550 ದರ ನಮೂದು ಮಾಡಿದ್ದೇನೆ. ಪ್ರತಿ ಕೆ.ಜಿ.ಗೆ ₹100 ರಂತೆ ಹಣ ಕಡಿತ ಮಾಡಿ ಉಳಿದಿದ್ದನ್ನು ಕೊಡುತ್ತೇನೆ. ಹಾಗೆಯೇ ವೇಸ್ಟೇಜ್ ಲೆಕ್ಕದಲ್ಲಿ 4 ಕೆ.ಜಿ. ಗೂಡಿನ ಹಣ ಕೊಡುವುದಿಲ್ಲ’ ಎಂದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿರೂಪಾಕ್ಷಪ್ಪ ‘ಹಾಗೆ ಮಾಡಬೇಡಿ. ಬೇಕಿದ್ದರೆ ನಿಮ್ಮ ಹರಾಜು ಹಿಂಪಡೆಯಿರಿ’ ಎಂದು ರೀಲರ್ಗೆ ಕೈ ಮುಗಿದಿದ್ದರು. ಈ ಸಂದರ್ಭ ರೀಲರ್ ಮತ್ತವರ ಬೆಂಬಲಿಗರು ವಿರೂಪಾಕ್ಷಪ್ಪ ಅವರನ್ನು ನಿಂದಿಸಿ, ಹಲ್ಲೆಗೂ ಯತ್ನಿಸಿದ್ದರು ಎಂದು ದೂರಲಾಗಿದೆ.