ಕಳೆದ ಒಂದು ವರ್ಷ ಕಾಲ ಜಿಲ್ಲೆಯ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದ ಅನೂಪ್ ಶೆಟ್ಟಿ ತಮ್ಮ ಕಾರ್ಯವೈಖರಿಯಿಂದ ಎಲ್ಲರ ಗಮನ ಸೆಳೆದಿದ್ದರು. ಜಿಲ್ಲೆಯಲ್ಲಿನ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ, ಗಾಂಜಾ ಮಾರಾಟ, ಜೂಜು ಸೇರಿದಂತೆ ಸಾಕಷ್ಟು ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರು. ಹಲವು ರಾಜಕೀಯ ಒತ್ತಡಗಳನ್ನು ಮೆಟ್ಟಿ ನಿಂತಿದ್ದರು. ಲಾಕ್ಡೌನ್ ಕಾಲದಲ್ಲಿ ಫೇಸ್ಬುಕ್, ಟ್ವಿಟರ್ ಲೈವ್ ಮೂಲಕ ಸಾರ್ವಜನಿಕರಿಗೆ ಸಾಕಷ್ಟು ಹತ್ತಿರವಾಗಿದ್ದರು. ಇಲಾಖೆಯೊಳಗಿನ ಸಿಬ್ಬಂದಿಯ ಭ್ರಷ್ಟಾಚಾರಕ್ಕೂ ಅವರು ಕಡಿವಾಣ ಹಾಕಿದ್ದರು. ಇದೇ ಅವರ ವರ್ಗಾವಣೆಯೂ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.