ರಾಮನಗರ: ರಾಮನಗರ ಎಸ್ಪಿ ಗಿರೀಶ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಗಿರೀಶ್ ಬಿಡದಿ ಪೊಲೀಸ್ ಠಾಣೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ದೃಢಪಟ್ಟಿತು.
ಗಿರೀಶ್ ರಾಮನಗರ ಜಿಲ್ಲೆಯಲ್ಲಿ ಈಚೆಗೆ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪೊಲೀಸ್ ಭದ್ರತೆಯ ನೇತೃತ್ವ ವಹಿಸಿದ್ದರು. ಅವರನ್ನೂ ಒಳಗೊಂಡು ಜಿಲ್ಲೆಯ 57 ಪೊಲೀಸರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆ ಆಗಿದೆ