<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಉಂಟಾದ ಸಂಚಾರ ದಟ್ಟಣೆ ನಿರ್ವಹಣೆ ಪ್ರಯತ್ನದಲ್ಲಿದ್ದ <strong>ಮೈಸೂರು </strong>ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಬೈಕ್ ಸವಾರನೊಬ್ಬನಿಗೆ ಒದೆಯಲು ಮುಂದಾದರು. ಆ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಮಧ್ಯಾಹ್ನ 1.30ರ ಸುಮಾರಿಗೆ ಸಿದ್ದರಾಮಯ್ಯ ಅವರು ಜಾತ್ರೆಯಲ್ಲಿನ ಕೃಷಿ ವಿಚಾರಸಂಕಿರಣವನ್ನು ಉದ್ಘಾಟಿಸಿ, ಸ್ನೇಹಿತ ನರಸೇಗೌಡ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ತರಾತುರಿಯಲ್ಲಿ ಕಾರ್ಯಕ್ರಮದಿಂದ ನಿರ್ಗಮಿಸಿದರು.</p><p>ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಕಿಲೋಮೀಟರ್ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಇಕ್ಕಟ್ಟಾದ ರಸ್ತೆಗಳಲ್ಲಿ ಮುಖ್ಯಮಂತ್ರಿಗಳ ವಾಹನಕ್ಕೆ ಜಾಗ ಮಾಡಿಕೊಡಲು ಪೊಲೀಸರು ಹರಸಾಹಸ ಪಟ್ಟರು.</p><p>ಖುದ್ದು ಬಾಲದಂಡಿ ಅವರೇ ರಸ್ತೆಗೆ ಇಳಿದಿದ್ದರು. ಮುಖ್ಯಮಂತ್ರಿಯವರ ವಾಹನಕ್ಕೆ ದಾರಿ ಮಾಡಿಕೊಟ್ಟ ನಂತರವೂ ವಾಹನಗಳ ಸಂಚಾರ ನಿಯಂತ್ರಿಸುತ್ತಿದ್ದರು. ಈ ವೇಳೆ ಬಸ್ಗೆ ಅಡ್ಡಲಾಗಿ ಬೈಕ್ ಓಡಿಸಲು ಸವಾರ ಮುಂದಾಗಿದ್ದರಿಂದ ಸಿಟ್ಟಿಗೆದ್ದ ಅಧಿಕಾರಿಯು, ಅವರತ್ತ ಕಾಲೆತ್ತಿದರು. ಇದನ್ನು ಸಾರ್ವಜನಿಕರು ವಿಡಿಯೊ ಮಾಡಿದ್ದಾರೆ.</p>.ಮೈಸೂರಿನ ಕಾಂಗ್ರೆಸ್ ಮುಖಂಡ, ಭಾನವಿ ಆಸ್ಪತ್ರೆಯ ಸಂಸ್ಥಾಪಕ ಸಿ. ನರಸೇಗೌಡ ನಿಧನ.‘ಬಿಗ್ ಬಾಸ್’ ಸ್ಟುಡಿಯೊ ಮುಂದೆ ಜಮಾಯಿಸಿದ ಅಭಿಮಾನಿಗಳು: ಗಿಲ್ಲಿ–ಕಾವ್ಯ ಕಟೌಟ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಉಂಟಾದ ಸಂಚಾರ ದಟ್ಟಣೆ ನಿರ್ವಹಣೆ ಪ್ರಯತ್ನದಲ್ಲಿದ್ದ <strong>ಮೈಸೂರು </strong>ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಬೈಕ್ ಸವಾರನೊಬ್ಬನಿಗೆ ಒದೆಯಲು ಮುಂದಾದರು. ಆ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಮಧ್ಯಾಹ್ನ 1.30ರ ಸುಮಾರಿಗೆ ಸಿದ್ದರಾಮಯ್ಯ ಅವರು ಜಾತ್ರೆಯಲ್ಲಿನ ಕೃಷಿ ವಿಚಾರಸಂಕಿರಣವನ್ನು ಉದ್ಘಾಟಿಸಿ, ಸ್ನೇಹಿತ ನರಸೇಗೌಡ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ತರಾತುರಿಯಲ್ಲಿ ಕಾರ್ಯಕ್ರಮದಿಂದ ನಿರ್ಗಮಿಸಿದರು.</p><p>ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಕಿಲೋಮೀಟರ್ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಇಕ್ಕಟ್ಟಾದ ರಸ್ತೆಗಳಲ್ಲಿ ಮುಖ್ಯಮಂತ್ರಿಗಳ ವಾಹನಕ್ಕೆ ಜಾಗ ಮಾಡಿಕೊಡಲು ಪೊಲೀಸರು ಹರಸಾಹಸ ಪಟ್ಟರು.</p><p>ಖುದ್ದು ಬಾಲದಂಡಿ ಅವರೇ ರಸ್ತೆಗೆ ಇಳಿದಿದ್ದರು. ಮುಖ್ಯಮಂತ್ರಿಯವರ ವಾಹನಕ್ಕೆ ದಾರಿ ಮಾಡಿಕೊಟ್ಟ ನಂತರವೂ ವಾಹನಗಳ ಸಂಚಾರ ನಿಯಂತ್ರಿಸುತ್ತಿದ್ದರು. ಈ ವೇಳೆ ಬಸ್ಗೆ ಅಡ್ಡಲಾಗಿ ಬೈಕ್ ಓಡಿಸಲು ಸವಾರ ಮುಂದಾಗಿದ್ದರಿಂದ ಸಿಟ್ಟಿಗೆದ್ದ ಅಧಿಕಾರಿಯು, ಅವರತ್ತ ಕಾಲೆತ್ತಿದರು. ಇದನ್ನು ಸಾರ್ವಜನಿಕರು ವಿಡಿಯೊ ಮಾಡಿದ್ದಾರೆ.</p>.ಮೈಸೂರಿನ ಕಾಂಗ್ರೆಸ್ ಮುಖಂಡ, ಭಾನವಿ ಆಸ್ಪತ್ರೆಯ ಸಂಸ್ಥಾಪಕ ಸಿ. ನರಸೇಗೌಡ ನಿಧನ.‘ಬಿಗ್ ಬಾಸ್’ ಸ್ಟುಡಿಯೊ ಮುಂದೆ ಜಮಾಯಿಸಿದ ಅಭಿಮಾನಿಗಳು: ಗಿಲ್ಲಿ–ಕಾವ್ಯ ಕಟೌಟ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>