ಬಿಡದಿಯ ಬಸವೇಶ್ವರ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದ ಬಳಿ ಕಂಡುಬಂದ ವಿದ್ಯಾರ್ಥಿಗಳು
ಮೊದಲ ದಿನದ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಪಾರದರ್ಶಕವಾಗಿ ಹಾಗೂ ಸುಸೂತ್ರವಾಗಿ ನಡೆಯಿತು. ವಿದ್ಯಾರ್ಥಿಗಳು ಸಹ ಆತ್ಮವಿಶ್ವಾಸದಿಂದ ಚನ್ನಾಗಿ ಪರೀಕ್ಷೆ ಬರೆದಿದ್ದಾರೆ
ಎಸ್. ಸ್ವಾಮಿ ಉಪ ನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ
ಹೂ ಕೊಟ್ಟು ಶುಭಾಶಯ!
ರಾಮನಗರ ತಾಲ್ಲೂಕಿನ ಬಿಡದಿಯ ಶ್ರೀ ಬಸವೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಕಾದಿತ್ತು. ‘ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಮಕ್ಕಳೇ’ ಎಂಬ ಫಲಕಗಳನ್ನು ಹಿಡಿದ ಶಿಕ್ಷಕರು ಹಾಗೂ ಸ್ಥಳೀಯರು ವಿದ್ಯಾರ್ಥಿಗಳಿಗೆ ಹೂ ನೀಡಿ ಪರೀಕ್ಷೆಗೆ ಶುಭಾಶಯ ಕೋರಿದರು. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್ ಜ್ಞಾನವಿಕಾಸ್ ವಿದ್ಯಾಸಂಘದ ನಿರ್ದೇಶಕ ಎಲ್. ಸತೀಶಚಂದ್ರ ಬನ್ನಿಕುಪ್ಪೆ (ಬಿ) ಕ್ಲಸ್ಟರ್ ಸಿಆರ್ಪಿ ಚಿಕ್ಕವೀರಯ್ಯ ಶಾಲೆ ಮುಖ್ಯ ಶಿಕ್ಷಕ ಗಿರೀಶ್ ಎ1 ಇಂಟರ್ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕ ಅಸ್ಗರ್ ಹಾಗೂ ಇತರರು ಇದ್ದಾರೆ.