<p><strong>ರಾಮನಗರ: </strong>ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಬುಧವಾರ ಜಿಲ್ಲೆಯ ವಿವಿಧೆಡೆ ನರೇಗಾ ಯೋಜನೆ ಅಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪ್ರಗತಿ ವೀಕ್ಷಿಸಿದರು.</p>.<p>ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ರೈತರಾದ ಸಂಜೀವೆಗೌಡ, ಉಗ್ರಪ್ಪ ಎಂಬುವರ ಶ್ರೀಗಂಧದ ಫಾರ್ಮ್ ಹೌಸ್ ಗೆ ಸಚಿವರು ಭೇಟಿ ನೀಡಿದರು. 'ಶ್ರೀಗಂಧದ ಬೀಡು ಕರ್ನಾಟಕದಲ್ಲಿ ಗಂಧದ ಅರಣ್ಯ ಕೃಷಿ ಮಾಡಲು ನರೇಗಾ ಯೋಜನೆಯ ಅಡಿ ಹೆಚ್ಚಿನ ಸವಲತ್ತು ನೀಡಲಾಗುವುದು. ರೇಷ್ಮೆ, ಹೈನುಗಾರಿಕೆ, ಕೋಳಿ ಸಾಕಣೆಗೆ ರೈತರು ನರೇಗಾ ಯೋಜನೆಯನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಸಂಸದ ಡಿ.ಕೆ. ಸುರೇಶ್ ಮಾತನಾಡಿ ಗಂಧ ಬೆಳೆಯುವ ರೈತರಿಗೆ ಸವಲತ್ತುಗಳನ್ನು ನೀಡುವ ಜೊತೆಗೆ ಶ್ರೀಗಂಧದ ಮರಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿದರು.</p>.<p>ಮಾಗಡಿ ತಾಲ್ಲೂಕಿನ ಮೋಟಗೊಂಡನಹಳ್ಳಿಯಲ್ಲಿ ನರೇಗಾ ಅಡಿ ಪುನರುಜ್ಜೀವನಗೊಂಡ ಕಲ್ಯಾಣಿಯನ್ನು ಸಚಿವರು ವೀಕ್ಷಿಸಿದರು. ರಾಮನಗರ ತಾಲ್ಲೂಕಿನ ಹಾಗಲಹಳ್ಳಿಯಲ್ಲಿ ರೇಷ್ಮೆ ಕೃಷಿ ಪರಿಶೀಲಿಸಿದರು.</p>.<p><strong>ಮಕ್ಕಳಿಗೆ ನಿರಾಸೆ:</strong> ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿಯಲ್ಲಿ ನರೇಗಾ ಯೋಜನೆ ಅಡಿ ಅಭಿವೃದ್ಧಿ ಪಡಿಸಿದ ಶಾಲಾ ಆಟದ ಮೈದಾನವನ್ನು ಕೇಂದ್ರ ಸಚಿವರು ಉದ್ಘಾಟಿಸಬೇಕಿತ್ತು. ಆದರೆ ಸಮಯದ ಅಭಾವದ ನೆಪವೊಡ್ಡಿ ಸಚಿವರು ಇಲ್ಲಿಗೆ ಭೇಟಿ ನೀಡಲಿಲ್ಲ. ಮಂತ್ರಿಗಳಿಂದ ಕ್ರೀಡಾಂಗಣ ಉದ್ಘಾಟಿಸಲು ಬೆಳಿಗ್ಗೆಯಿಂದ ಕಾದಿದ್ದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಇದರಿಂದ ನಿರಾಸೆ ಆಯಿತು. ಅಂತೆಯೇ ಸಚಿವರ ಇನ್ನೂ ಕೆಲವು ಪೂರ್ವ ನಿಗದಿತ ಕಾರ್ಯಕ್ರಮಗಳು ರದ್ದಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಬುಧವಾರ ಜಿಲ್ಲೆಯ ವಿವಿಧೆಡೆ ನರೇಗಾ ಯೋಜನೆ ಅಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪ್ರಗತಿ ವೀಕ್ಷಿಸಿದರು.</p>.<p>ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ರೈತರಾದ ಸಂಜೀವೆಗೌಡ, ಉಗ್ರಪ್ಪ ಎಂಬುವರ ಶ್ರೀಗಂಧದ ಫಾರ್ಮ್ ಹೌಸ್ ಗೆ ಸಚಿವರು ಭೇಟಿ ನೀಡಿದರು. 'ಶ್ರೀಗಂಧದ ಬೀಡು ಕರ್ನಾಟಕದಲ್ಲಿ ಗಂಧದ ಅರಣ್ಯ ಕೃಷಿ ಮಾಡಲು ನರೇಗಾ ಯೋಜನೆಯ ಅಡಿ ಹೆಚ್ಚಿನ ಸವಲತ್ತು ನೀಡಲಾಗುವುದು. ರೇಷ್ಮೆ, ಹೈನುಗಾರಿಕೆ, ಕೋಳಿ ಸಾಕಣೆಗೆ ರೈತರು ನರೇಗಾ ಯೋಜನೆಯನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಸಂಸದ ಡಿ.ಕೆ. ಸುರೇಶ್ ಮಾತನಾಡಿ ಗಂಧ ಬೆಳೆಯುವ ರೈತರಿಗೆ ಸವಲತ್ತುಗಳನ್ನು ನೀಡುವ ಜೊತೆಗೆ ಶ್ರೀಗಂಧದ ಮರಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿದರು.</p>.<p>ಮಾಗಡಿ ತಾಲ್ಲೂಕಿನ ಮೋಟಗೊಂಡನಹಳ್ಳಿಯಲ್ಲಿ ನರೇಗಾ ಅಡಿ ಪುನರುಜ್ಜೀವನಗೊಂಡ ಕಲ್ಯಾಣಿಯನ್ನು ಸಚಿವರು ವೀಕ್ಷಿಸಿದರು. ರಾಮನಗರ ತಾಲ್ಲೂಕಿನ ಹಾಗಲಹಳ್ಳಿಯಲ್ಲಿ ರೇಷ್ಮೆ ಕೃಷಿ ಪರಿಶೀಲಿಸಿದರು.</p>.<p><strong>ಮಕ್ಕಳಿಗೆ ನಿರಾಸೆ:</strong> ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿಯಲ್ಲಿ ನರೇಗಾ ಯೋಜನೆ ಅಡಿ ಅಭಿವೃದ್ಧಿ ಪಡಿಸಿದ ಶಾಲಾ ಆಟದ ಮೈದಾನವನ್ನು ಕೇಂದ್ರ ಸಚಿವರು ಉದ್ಘಾಟಿಸಬೇಕಿತ್ತು. ಆದರೆ ಸಮಯದ ಅಭಾವದ ನೆಪವೊಡ್ಡಿ ಸಚಿವರು ಇಲ್ಲಿಗೆ ಭೇಟಿ ನೀಡಲಿಲ್ಲ. ಮಂತ್ರಿಗಳಿಂದ ಕ್ರೀಡಾಂಗಣ ಉದ್ಘಾಟಿಸಲು ಬೆಳಿಗ್ಗೆಯಿಂದ ಕಾದಿದ್ದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಇದರಿಂದ ನಿರಾಸೆ ಆಯಿತು. ಅಂತೆಯೇ ಸಚಿವರ ಇನ್ನೂ ಕೆಲವು ಪೂರ್ವ ನಿಗದಿತ ಕಾರ್ಯಕ್ರಮಗಳು ರದ್ದಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>