<p><strong>ರಾಮನಗರ:</strong> ಅತ್ಯಂತ ಹಿಂದುಳಿದ ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ವಿಶೇಷ ಮೀಸಲಾತಿ ಒದಗಿಸಬೇಕು. ಸರ್ಕಾರದ ಗಮನ ಸೆಳೆಯಲು ಬೀದರ್ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.</p>.<p>ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಪಾದಯಾತ್ರೆಯು ಸುಮಾರು 40 ದಿನ ನಡೆಯಲಿದೆ. ಬೆಂಗಳೂರಿನಲ್ಲಿ ಸಮುದಾಯದ 41 ಪಂಗಡಗಳ ಜನ ಸೇರಿ ಬೃಹತ್ ಸಮಾವೇಶ ನಡೆಸಿ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>1977ರಲ್ಲಿ ಎಲ್.ಜಿ. ಹಾವನೂರು ಅವರು ನಮ್ಮ ಸಮುದಾಯದ ಕಷ್ಟಗಳನ್ನು ಗಮನಿಸದೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದ್ದಾರೆ. ಈ ಅನ್ಯಾಯದ ವಿರುದ್ಧ ಸತತವಾಗಿ ಮಾಡಿದ ಹೋರಾಟದಿಂದಾಗಿ ಸರ್ಕಾರ ಎರಡು ವರ್ಷದ ಹಿಂದೆ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ವಕರ್ಮ ಸಮಾಜದ ಸ್ಥಿತಿಗತಿ ಅರಿಯಲು ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿತು ಎಂದರು.</p>.<p>‘ಅಧ್ಯಯನ ನಡೆಸಿದ ಅಲ್ಲಿನ ಪ್ರಾಧ್ಯಾಪಕರು ಪೂರ್ವಗ್ರಹ ಪೀಡಿತರಾಗಿ ವಿಶ್ವಕರ್ಮ ಸಮುದಾಯವು ಯಾವುದೇ ಬುಡಕಟ್ಟು ಲಕ್ಷಣಗಳನ್ನು ಹೊಂದಿಲ್ಲ ಎಂದು ಸುಳ್ಳು ವರದಿ ನೀಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆ ವರದಿಯನ್ನು ಮರು ಪರಿಶೀಲಿಸಿ ಸಮಾಜಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಕಂಚಿನ ಕೆಲಸ, ಶಿಲ್ಪ ಕೆತ್ತನೆ ಮೂಲಕ ಬದುಕು ಕಟ್ಟಿಕೊಂಡಿರುವ ವಿಶ್ವಕರ್ಮ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಶೈಕ್ಷಣಿಕವಾಗಿ ಅತಿ ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಪ್ರಜ್ಞೆ ಇಲ್ಲ’ ಎಂದರು.</p>.<p>‘ಸಮುದಾಯದ 41 ಪಂಗಡಗಳಲ್ಲಿ ಕಮ್ಮಾ ಎಂಬುವ ಪಂಗಡಕ್ಕೆ ಕೊಳ್ಳೆಗಾಲ ತಾಲ್ಲೂಕು, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಲಾಗಿದೆ. ಅದೇ ಮಾದರಿಯಲ್ಲಿ ವಿಶ್ವಕರ್ಮ ಸಮಾಜದ ಎಲ್ಲ 41 ಪಂಗಡಗಳಿಗೂ ಪ್ರಮಾಣಪತ್ರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಮುದಾಯದ ಸಂಘಟನೆಗಾಗಿ ನಾನು ಕಳೆದ 25 ವರ್ಷಗಳಿಂದ ಹೋರಾಡುತ್ತಲೇ ಬಂದಿದ್ದೇನೆ. ಎಲ್ಲಾ ಪಕ್ಷಗಳ ಹಾಗೂ ಸರ್ಕಾರಗಳ ಅವಧಿಯಲ್ಲೂ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಪಾಲು ಕೊಡುವಂತೆ ಕೇಳುತ್ತಲೇ ಇದ್ದೇನೆ. ಆದರೆ, ನಮ್ಮದು ಅರಣ್ಯರೋದನವಾಗಿದೆ’ ಎಂದು ಹೇಳಿದರು.</p>.<p>ಮಹಾಸಭಾ ಉಪಾಧ್ಯಕ್ಷ ಬಸವರಾಜು, ಬೆಂಗಳೂರು ದಕ್ಷಿಣ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸಮುದಾಯದ ಕುಮಾರ್, ಜನಾರ್ಧನ್, ನಿಂಗರಾಜು, ಸಿದ್ದರಾಜು, ರಾಮಾಚಾರ್, ರವಿಪ್ರಕಾಶ್, ಕುಮಾರ್ ಕರೇನಹಳ್ಳಿ, ಲಕ್ಷ್ಮೀನಾರಾಯಣ್, ಸೋಮನಹಳ್ಳಿ ರಾಜೇಶ್, ಜನಾರ್ದನ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260318-14-52255610</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಅತ್ಯಂತ ಹಿಂದುಳಿದ ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ವಿಶೇಷ ಮೀಸಲಾತಿ ಒದಗಿಸಬೇಕು. ಸರ್ಕಾರದ ಗಮನ ಸೆಳೆಯಲು ಬೀದರ್ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.</p>.<p>ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಪಾದಯಾತ್ರೆಯು ಸುಮಾರು 40 ದಿನ ನಡೆಯಲಿದೆ. ಬೆಂಗಳೂರಿನಲ್ಲಿ ಸಮುದಾಯದ 41 ಪಂಗಡಗಳ ಜನ ಸೇರಿ ಬೃಹತ್ ಸಮಾವೇಶ ನಡೆಸಿ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>1977ರಲ್ಲಿ ಎಲ್.ಜಿ. ಹಾವನೂರು ಅವರು ನಮ್ಮ ಸಮುದಾಯದ ಕಷ್ಟಗಳನ್ನು ಗಮನಿಸದೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದ್ದಾರೆ. ಈ ಅನ್ಯಾಯದ ವಿರುದ್ಧ ಸತತವಾಗಿ ಮಾಡಿದ ಹೋರಾಟದಿಂದಾಗಿ ಸರ್ಕಾರ ಎರಡು ವರ್ಷದ ಹಿಂದೆ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ವಕರ್ಮ ಸಮಾಜದ ಸ್ಥಿತಿಗತಿ ಅರಿಯಲು ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿತು ಎಂದರು.</p>.<p>‘ಅಧ್ಯಯನ ನಡೆಸಿದ ಅಲ್ಲಿನ ಪ್ರಾಧ್ಯಾಪಕರು ಪೂರ್ವಗ್ರಹ ಪೀಡಿತರಾಗಿ ವಿಶ್ವಕರ್ಮ ಸಮುದಾಯವು ಯಾವುದೇ ಬುಡಕಟ್ಟು ಲಕ್ಷಣಗಳನ್ನು ಹೊಂದಿಲ್ಲ ಎಂದು ಸುಳ್ಳು ವರದಿ ನೀಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆ ವರದಿಯನ್ನು ಮರು ಪರಿಶೀಲಿಸಿ ಸಮಾಜಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಕಂಚಿನ ಕೆಲಸ, ಶಿಲ್ಪ ಕೆತ್ತನೆ ಮೂಲಕ ಬದುಕು ಕಟ್ಟಿಕೊಂಡಿರುವ ವಿಶ್ವಕರ್ಮ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಶೈಕ್ಷಣಿಕವಾಗಿ ಅತಿ ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಪ್ರಜ್ಞೆ ಇಲ್ಲ’ ಎಂದರು.</p>.<p>‘ಸಮುದಾಯದ 41 ಪಂಗಡಗಳಲ್ಲಿ ಕಮ್ಮಾ ಎಂಬುವ ಪಂಗಡಕ್ಕೆ ಕೊಳ್ಳೆಗಾಲ ತಾಲ್ಲೂಕು, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಲಾಗಿದೆ. ಅದೇ ಮಾದರಿಯಲ್ಲಿ ವಿಶ್ವಕರ್ಮ ಸಮಾಜದ ಎಲ್ಲ 41 ಪಂಗಡಗಳಿಗೂ ಪ್ರಮಾಣಪತ್ರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಮುದಾಯದ ಸಂಘಟನೆಗಾಗಿ ನಾನು ಕಳೆದ 25 ವರ್ಷಗಳಿಂದ ಹೋರಾಡುತ್ತಲೇ ಬಂದಿದ್ದೇನೆ. ಎಲ್ಲಾ ಪಕ್ಷಗಳ ಹಾಗೂ ಸರ್ಕಾರಗಳ ಅವಧಿಯಲ್ಲೂ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಪಾಲು ಕೊಡುವಂತೆ ಕೇಳುತ್ತಲೇ ಇದ್ದೇನೆ. ಆದರೆ, ನಮ್ಮದು ಅರಣ್ಯರೋದನವಾಗಿದೆ’ ಎಂದು ಹೇಳಿದರು.</p>.<p>ಮಹಾಸಭಾ ಉಪಾಧ್ಯಕ್ಷ ಬಸವರಾಜು, ಬೆಂಗಳೂರು ದಕ್ಷಿಣ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸಮುದಾಯದ ಕುಮಾರ್, ಜನಾರ್ಧನ್, ನಿಂಗರಾಜು, ಸಿದ್ದರಾಜು, ರಾಮಾಚಾರ್, ರವಿಪ್ರಕಾಶ್, ಕುಮಾರ್ ಕರೇನಹಳ್ಳಿ, ಲಕ್ಷ್ಮೀನಾರಾಯಣ್, ಸೋಮನಹಳ್ಳಿ ರಾಜೇಶ್, ಜನಾರ್ದನ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260318-14-52255610</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>