ಕ್ಷೇತ್ರದಲ್ಲಿ ತಾವು ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಿಕೊಂಡು ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಈಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಸಯ್ಯದ್ ಜಿಯಾವುಲ್ಲಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಇದು ಹಲವು ಗೊಂದಲಗಳಿಗೆ ಕಾರಣ ಆಗಿತ್ತು. ಈ ಗೊಂದಲ ಬಗೆಹರಿಸುವ ಸಲುವಾಗಿ ಶಿವಕುಮಾರ್ ಸಭೆ ಕರೆದಿದ್ದರು.