<p><strong>ಕನಕಪುರ:</strong> ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮನಬಂದಂತೆ ಥಳಿಸಿರುವುದು ಸೀಗೆಕೋಟೆ ಅನುಜವಾಡಿದೊಡ್ಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡವರು. ಇದೇ ಗ್ರಾಮದ ಬಾಬೇಸ್ ನಾಯ್ಕ ಮತ್ತು ಶಿವುನಾಯ್ಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಗಳು.</p>.<p>ಕರ್ನಾಟಕ ಬಂಜಾರ ಲಂಬಾಣಿ ಜನ ಸೇವಾ ಸಂಘದ ಅಧ್ಯಕ್ಷ ಎ.ಆರ್.ಹನುಮಂತ ನಾಯ್ಕ್ ಹಲ್ಲೆ ಮಾಡುತ್ತಿದ್ದವರನ್ನು ತಡೆದು, ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಆರೋಪಿಗಳು ಈ ಹಿಂದೆಯೂ ಹಲ್ಲೆ ನಡೆಸಿದ್ದು ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಮಾತುಕತೆ ಮೂಲಕ ದೂರು ನೀಡದೆ ಬಗೆಹರಿಸಿಕೊಳ್ಳಲಾಗಿತ್ತು ಎಂದು ಹಲ್ಲೆಗೆ ಒಳಗಾದವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮನಬಂದಂತೆ ಥಳಿಸಿರುವುದು ಸೀಗೆಕೋಟೆ ಅನುಜವಾಡಿದೊಡ್ಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡವರು. ಇದೇ ಗ್ರಾಮದ ಬಾಬೇಸ್ ನಾಯ್ಕ ಮತ್ತು ಶಿವುನಾಯ್ಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಗಳು.</p>.<p>ಕರ್ನಾಟಕ ಬಂಜಾರ ಲಂಬಾಣಿ ಜನ ಸೇವಾ ಸಂಘದ ಅಧ್ಯಕ್ಷ ಎ.ಆರ್.ಹನುಮಂತ ನಾಯ್ಕ್ ಹಲ್ಲೆ ಮಾಡುತ್ತಿದ್ದವರನ್ನು ತಡೆದು, ಕಿರಣ್ ಕುಮಾರ್ ನಾಯ್ಕ್ ಮತ್ತು ವೆಂಕಟೇಶ್ ನಾಯ್ಕ್ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಆರೋಪಿಗಳು ಈ ಹಿಂದೆಯೂ ಹಲ್ಲೆ ನಡೆಸಿದ್ದು ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಮಾತುಕತೆ ಮೂಲಕ ದೂರು ನೀಡದೆ ಬಗೆಹರಿಸಿಕೊಳ್ಳಲಾಗಿತ್ತು ಎಂದು ಹಲ್ಲೆಗೆ ಒಳಗಾದವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>