<p><strong>ಕನಕಪುರ</strong>: ರಾಮನಗರ ಜಿಲ್ಲೆ ಹೆಸರು ಬದಲಿಸಲು ಹೊರಟಿರುವುದು ಖಂಡನೀಯ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಅಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ರೈತ ಸಂಘದಿಂದ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. </p>.<p>ಜಿಲ್ಲೆ ಹೆಸರು ಬದಲಾವಣೆ ಮಾಡಿ ಭೂಮಿಗೆ ಹೆಚ್ಚಿನ ಬೆಲೆ ಬರಬಹುದು. ಬೆಲೆ ಬಂದರೆ ರೈತರು ಕೃಷಿ ಮಾಡುವುದನ್ನು ಬಿಟ್ಟು ತಮ್ಮ ಜಮೀನು ಮಾರಾಟ ಮಾಡಿ ತಮ್ಮದೇ ಜಮೀನಿನಲ್ಲಿ ಕಾವಲುಗಾರ, ಕೂಲಿ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ‘ರಾಮನಗರವನ್ನು ನವಬೆಂಗಳೂರಾಗಿ ಮಾಡಿದರೆ ಚೆನ್ನಾಗಿ ಅಭಿವೃದ್ಧಿ ಆಗಲಿದೆ ಎಂದು ಹೇಳುತ್ತಿದ್ದೀರಿ. ನಾಳೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆ ಜನರು ಬೆಂಗಳೂರು ಜಿಲ್ಲೆಯನ್ನಾಗಿ ಮಾಡಿ ಎಂದರೆ ಮಾಡುತ್ತೀರಾ’ ಎಂದು ಪ್ರಶ್ನಿಸಿದರು.</p>.<p>35 ವರ್ಷಗಳಿಂದ ಚನ್ನಪಟ್ಟಣದ ಅಭಿವೃದ್ಧಿಗೆ ಗಮನ ಕೊಡದ ಉಪಮುಖ್ಯಮಂತ್ರಿ ಶಿವಕುಮಾರ್ ಅವರು, ರಾಜಕೀಯ ಲಾಭಕ್ಕಾಗಿ ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಜನರನ್ನು ನಂಬಿಸಿ ವಂಚಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.</p>.<p>ಸಂಘಟನೆ ಮುಖಂಡರಾದ ಬಸವರಾಜು, ಕೆ.ಎಸ್.ಭಾಸ್ಕರ್, ನಂಜರಾಜ ಅರಸು, ಕುಮಾರ್, ರವಿ ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ರಾಮನಗರ ಜಿಲ್ಲೆ ಹೆಸರು ಬದಲಿಸಲು ಹೊರಟಿರುವುದು ಖಂಡನೀಯ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಅಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ರೈತ ಸಂಘದಿಂದ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. </p>.<p>ಜಿಲ್ಲೆ ಹೆಸರು ಬದಲಾವಣೆ ಮಾಡಿ ಭೂಮಿಗೆ ಹೆಚ್ಚಿನ ಬೆಲೆ ಬರಬಹುದು. ಬೆಲೆ ಬಂದರೆ ರೈತರು ಕೃಷಿ ಮಾಡುವುದನ್ನು ಬಿಟ್ಟು ತಮ್ಮ ಜಮೀನು ಮಾರಾಟ ಮಾಡಿ ತಮ್ಮದೇ ಜಮೀನಿನಲ್ಲಿ ಕಾವಲುಗಾರ, ಕೂಲಿ ಕಾರ್ಮಿಕರಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ‘ರಾಮನಗರವನ್ನು ನವಬೆಂಗಳೂರಾಗಿ ಮಾಡಿದರೆ ಚೆನ್ನಾಗಿ ಅಭಿವೃದ್ಧಿ ಆಗಲಿದೆ ಎಂದು ಹೇಳುತ್ತಿದ್ದೀರಿ. ನಾಳೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆ ಜನರು ಬೆಂಗಳೂರು ಜಿಲ್ಲೆಯನ್ನಾಗಿ ಮಾಡಿ ಎಂದರೆ ಮಾಡುತ್ತೀರಾ’ ಎಂದು ಪ್ರಶ್ನಿಸಿದರು.</p>.<p>35 ವರ್ಷಗಳಿಂದ ಚನ್ನಪಟ್ಟಣದ ಅಭಿವೃದ್ಧಿಗೆ ಗಮನ ಕೊಡದ ಉಪಮುಖ್ಯಮಂತ್ರಿ ಶಿವಕುಮಾರ್ ಅವರು, ರಾಜಕೀಯ ಲಾಭಕ್ಕಾಗಿ ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಜನರನ್ನು ನಂಬಿಸಿ ವಂಚಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.</p>.<p>ಸಂಘಟನೆ ಮುಖಂಡರಾದ ಬಸವರಾಜು, ಕೆ.ಎಸ್.ಭಾಸ್ಕರ್, ನಂಜರಾಜ ಅರಸು, ಕುಮಾರ್, ರವಿ ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>