ಪಟ್ಟಣದ ರಾಮ ಮಂದಿರದಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ, ಶ್ರೀರಾಮ ತಾರಕ ಹೋಮ, ರಾಮ ಭಜನೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಹೂವಿನಿಂದ ಅಲಂಕಾರ ಮಾಡಲಾಗಿತ್ತು. ರಾಮನ ಉತ್ಸವ ಮೂರ್ತಿ ನಗರ ಪ್ರದಕ್ಷಿಣೆ ನಡೆಸಲಾಯಿತು. ಈ ವೇಳೆ ನೂರಾರು ರಾಮ ಭಕ್ತರಿಂದ ರಾಮನ ಜಯಘೋಷ ಮುಗಿಲು ಮುಟ್ಟಿತ್ತು. ಈ ವೇಳೆ ಶಾಲಾ ಮಕ್ಕಳು ರಾಮ, ಲಕ್ಷ್ಮಣ, ಸೀತೆ, ಆಂಜನೇಯ ವೇಷ ಧರಿಸಿ ಮಿಂಚಿದರು.