ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಕ್ತೆ ಮೇಲಿನ ಅತ್ಯಾಚಾರ ಆರೋಪ: ನಿತ್ಯಾನಂದ ಸ್ವಾಮೀಜಿ ವಿರುದ್ಧ ವಾರಂಟ್‌

Last Updated 19 ಆಗಸ್ಟ್ 2022, 4:14 IST
ಅಕ್ಷರ ಗಾತ್ರ

ರಾಮನಗರ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಮತ್ತೊಮ್ಮೆ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ನಿತ್ಯಾನಂದ ಸ್ವಾಮೀಜಿಗೆ ಜಾಮೀನು ಭದ್ರತೆ ನೀಡಿರುವ ವ್ಯಕ್ತಿಗೂ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ವಿಚಾರಣೆಯನ್ನು ಸೆಪ್ಟೆಂಬರ್‌ 23ಕ್ಕೆ ಮುಂದೂಡಿತು.

ಭಕ್ತೆ ಮೇಲಿನ ಅತ್ಯಾಚಾರ ಆರೋಪದ ಮೇಲೆ 2010ರಲ್ಲಿ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಂದಿನಿಂದಲೂ ವಿಚಾರಣೆ ನಡೆಯುತ್ತಿದೆ. 2019ರಿಂದ ನಿತ್ಯಾನಂದ ವಿಚಾರಣೆಗೆ ಸತತ ಗೈರಾಗಿದ್ದು, ಈಗಾಗಲೇ ದೇಶ ತೊರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT