ಅಧಿಕಾರಿಗಳೊಂದಿಗೆ ರಶ್ಮಿ ಮಹೇಶ್ ಸಮಾಲೋಚನೆ ನಡೆಸಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಿದರು.
ಜ.23ರಂದು ಜಿಲ್ಲಾಧಿಕಾರಿ ಅವಿನಾಶ್ ರಾಜೇಂದ್ರ ಮೆನನ್ ಕೂಡ ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಮಹೇಂದ್ರ, ಉಪನೋಂದಣಾಧಿಕಾರಿ ರೇಣುಕಾ ಪ್ರಸಾದ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.