<p><strong>ಹಾರೋಹಳ್ಳಿ</strong>: ಕ್ಷೇತ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದವರು ಸಾಗುವಳಿ ಚೀಟಿ ವಿಚಾರದಲ್ಲಿ ರಾಜಕೀಯ ನಡೆಸಿದ್ದಾರೆ. ಬಡವರ ಹಕ್ಕುಗಳನ್ನು ಕಲ್ಪಿಸುವುದರಲ್ಲಿ ರಾಜಕೀಯ ಮಾಡಿರುವುದು ಖಂಡನೀಯ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.</p>.<p>ತಾಲ್ಲೂಕಿನ ಬೆಸ್ಕಾಂ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಮಿತಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ ಹಲವು ಅರ್ಜಿಗಳನ್ನು ರಾಜಕೀಯ ನಡೆಸಿ ವಜಾಗೊಳಿಸಲಾಗಿದೆ. ಅವುಗಳನ್ನು ಪುನರ್ ಪರಿಶೀಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಕಂದಾಯ ಸಚಿವರಲ್ಲಿ ಮನವಿ ಮಾಡಲಾಗುವುದು. ರೈತರಿಗೆ ಸಾಗುವಳಿ ಚೀಟಿ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಸಾಗುವಳಿ ಚೀಟಿಗಾಗಿ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಸಾಗುವಳಿ ಚೀಟಿಗೆ ಕಾನೂನು ತೊಡಕುಂಟಾಗಿದೆ. ಬಗರ್ ಹುಕುಂ ಸಾಗುವಳಿ ಚೀಟಿ ವಿಚಾರವಾಗಿ ಹಲವು ಸಮಸ್ಯೆಗಳಿವೆ. ಕೆಲವು ಅರ್ಜಿಗಳು ಒ.ಎಂ.ಆಗಿದೆ. ಕೆಲವು ಷರಾ ಬರೆಯಲಾಗಿದೆ. ಈ ರೀತಿಯ ಅಡಚಣೆ ಇರುವ 350 ಅರ್ಜಿಗಳನ್ನು ಪರಿಶೀಲಿಸಿ ಅಡಚಣೆ ನಿವಾರಿಸಿ ಖಾತೆ ಮಾಡಿ ಪಹಣಿ ಮಾಡಿಕೊಡುವ ಕೆಲಸವನ್ನು ಮೊದಲಿಗೆ ಮಾಡಲಾಗುತ್ತಿದೆ. ಸಾಗುವಳಿ ವಿಚಾರವಾಗಿ ಹತ್ತು ಹಲವು ಸಮಸ್ಯೆಗಳು ಕಾಡುತ್ತಿವೆ. ಬಡವರಿಗೆ ಅವರ ಹಕ್ಕು ನೀಡಲು ಶಕ್ತಿಮೀರಿ ಸಮಿತಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.</p>.<p>ರೈತರು ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಬಿಬಿಎಂಪಿ, ನಗರಸಭೆ, ಪುರಸಭೆಗಳಾಗಿ ವಿಂಗಡಿಸಿರುವುದು 2021-22ರಲ್ಲಿ ಹಾಗಾಗಿ ರೈತರಿಗೆ ತೊಂದರೆಯಾಗಿದೆ. ಈ ಬಗ್ಗೆ ಕಂದಾಯ ಸಚಿವರ ಬಳಿ ಚರ್ಚಿಸಲಾಗಿದೆ. ಪ್ರಾಮಾಣಿಕವಾಗಿ ಪ್ರಯತ್ನಿಸಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದರು.</p>.<p>ಕುಮಾರಸ್ವಾಮಿಗೆ ಗೊತ್ತು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು 2006ರಿಂದಲೂ ಶಾಸಕರಾಗಿದ್ದಾರೆ. ವಿಧಾನಸೌಧದಲ್ಲಿ ಹೆಚ್ಚು ಇದ್ದವರೇ ಅವರು. ಹೀಗಿರುವಾಗ ವಿಧಾನಸೌಧದಲ್ಲಿರುವ ಉಗ್ರರು ಯಾರೆಂದು ಅವರೇ ಹೇಳಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.</p>.<p>ವಿಧಾನಸೌಧದಲ್ಲಿ ಇರುವ ಉಗ್ರರ ಬಗ್ಗೆ ಹೇಳಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಧಾನಸೌಧದಲ್ಲಿ ಉಗ್ರರಿರಲು ಸಾಧ್ಯವೇ? ಅವರ ಕಣ್ಣಿಗೆ ಉಗ್ರರ ರೀತಿ ಯಾರು ಕಾಣುತ್ತಿದ್ದಾರೆ. ಮೊದಲು ಕುಮರಸ್ವಾಮಿ ಈ ರೀತಿ ಹೇಳಿಕೆ ನೀಡುವುದನ್ನು ಬಿಡಬೇಕು ಎಂದರು.</p>.<p>ತಹಶೀಲ್ದಾರ್ ಹರ್ಷವರ್ಧನ್, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಜೆಸಿಬಿ ಅಶೋಕ್, ಪುಟ್ಟಸ್ವಾಮಿ, ನಾಗೇಶ್, ಬಾಲಾಜಿ, ರುದ್ರೇಶ್ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ಕ್ಷೇತ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದವರು ಸಾಗುವಳಿ ಚೀಟಿ ವಿಚಾರದಲ್ಲಿ ರಾಜಕೀಯ ನಡೆಸಿದ್ದಾರೆ. ಬಡವರ ಹಕ್ಕುಗಳನ್ನು ಕಲ್ಪಿಸುವುದರಲ್ಲಿ ರಾಜಕೀಯ ಮಾಡಿರುವುದು ಖಂಡನೀಯ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.</p>.<p>ತಾಲ್ಲೂಕಿನ ಬೆಸ್ಕಾಂ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಮಿತಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ ಹಲವು ಅರ್ಜಿಗಳನ್ನು ರಾಜಕೀಯ ನಡೆಸಿ ವಜಾಗೊಳಿಸಲಾಗಿದೆ. ಅವುಗಳನ್ನು ಪುನರ್ ಪರಿಶೀಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಕಂದಾಯ ಸಚಿವರಲ್ಲಿ ಮನವಿ ಮಾಡಲಾಗುವುದು. ರೈತರಿಗೆ ಸಾಗುವಳಿ ಚೀಟಿ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಸಾಗುವಳಿ ಚೀಟಿಗಾಗಿ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಸಾಗುವಳಿ ಚೀಟಿಗೆ ಕಾನೂನು ತೊಡಕುಂಟಾಗಿದೆ. ಬಗರ್ ಹುಕುಂ ಸಾಗುವಳಿ ಚೀಟಿ ವಿಚಾರವಾಗಿ ಹಲವು ಸಮಸ್ಯೆಗಳಿವೆ. ಕೆಲವು ಅರ್ಜಿಗಳು ಒ.ಎಂ.ಆಗಿದೆ. ಕೆಲವು ಷರಾ ಬರೆಯಲಾಗಿದೆ. ಈ ರೀತಿಯ ಅಡಚಣೆ ಇರುವ 350 ಅರ್ಜಿಗಳನ್ನು ಪರಿಶೀಲಿಸಿ ಅಡಚಣೆ ನಿವಾರಿಸಿ ಖಾತೆ ಮಾಡಿ ಪಹಣಿ ಮಾಡಿಕೊಡುವ ಕೆಲಸವನ್ನು ಮೊದಲಿಗೆ ಮಾಡಲಾಗುತ್ತಿದೆ. ಸಾಗುವಳಿ ವಿಚಾರವಾಗಿ ಹತ್ತು ಹಲವು ಸಮಸ್ಯೆಗಳು ಕಾಡುತ್ತಿವೆ. ಬಡವರಿಗೆ ಅವರ ಹಕ್ಕು ನೀಡಲು ಶಕ್ತಿಮೀರಿ ಸಮಿತಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.</p>.<p>ರೈತರು ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಬಿಬಿಎಂಪಿ, ನಗರಸಭೆ, ಪುರಸಭೆಗಳಾಗಿ ವಿಂಗಡಿಸಿರುವುದು 2021-22ರಲ್ಲಿ ಹಾಗಾಗಿ ರೈತರಿಗೆ ತೊಂದರೆಯಾಗಿದೆ. ಈ ಬಗ್ಗೆ ಕಂದಾಯ ಸಚಿವರ ಬಳಿ ಚರ್ಚಿಸಲಾಗಿದೆ. ಪ್ರಾಮಾಣಿಕವಾಗಿ ಪ್ರಯತ್ನಿಸಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದರು.</p>.<p>ಕುಮಾರಸ್ವಾಮಿಗೆ ಗೊತ್ತು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು 2006ರಿಂದಲೂ ಶಾಸಕರಾಗಿದ್ದಾರೆ. ವಿಧಾನಸೌಧದಲ್ಲಿ ಹೆಚ್ಚು ಇದ್ದವರೇ ಅವರು. ಹೀಗಿರುವಾಗ ವಿಧಾನಸೌಧದಲ್ಲಿರುವ ಉಗ್ರರು ಯಾರೆಂದು ಅವರೇ ಹೇಳಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.</p>.<p>ವಿಧಾನಸೌಧದಲ್ಲಿ ಇರುವ ಉಗ್ರರ ಬಗ್ಗೆ ಹೇಳಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಧಾನಸೌಧದಲ್ಲಿ ಉಗ್ರರಿರಲು ಸಾಧ್ಯವೇ? ಅವರ ಕಣ್ಣಿಗೆ ಉಗ್ರರ ರೀತಿ ಯಾರು ಕಾಣುತ್ತಿದ್ದಾರೆ. ಮೊದಲು ಕುಮರಸ್ವಾಮಿ ಈ ರೀತಿ ಹೇಳಿಕೆ ನೀಡುವುದನ್ನು ಬಿಡಬೇಕು ಎಂದರು.</p>.<p>ತಹಶೀಲ್ದಾರ್ ಹರ್ಷವರ್ಧನ್, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಜೆಸಿಬಿ ಅಶೋಕ್, ಪುಟ್ಟಸ್ವಾಮಿ, ನಾಗೇಶ್, ಬಾಲಾಜಿ, ರುದ್ರೇಶ್ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>