<p><strong>ರಾಮನಗರ: </strong>ಆರ್ಎಸ್ಎಸ್ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಈ ಬಗ್ಗೆ ಯಾವುದೇ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಬಿಜೆಪಿಯು ಆರ್ ಎಸ್ ಜೊತೆ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿದೆ' ಎಂದು ದೂರಿದರು. ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ಉಗ್ರರು ಶಾಲೆಗೆ ನುಗ್ಗಿ ಶಿಕ್ಷಕರನ್ನು ಕೊಂದು ಹಾಕಿದ್ದಾರೆ. ಈ ವರ್ಷ ಗಡಿಯಲ್ಲಿ ಹೆಚ್ಚು ಸೈನಿಕರ ಸಾವಾಗಿದೆ. ಇದೇನಾ ಆರ್ಎಸ್ಎಸ್ ನಿಮಗೆ ಸರ್ಕಾರ ನಡೆಸುವುದು ಹೇಗೆ ಎಂದು ಹೇಳಿಕೊಟ್ಟಿರುವ ಪಾಠ' ಎಂದು ಪ್ರಶ್ನಿಸಿದರು.</p>.<p><strong>ಕಾಂಗ್ರೆಸ್ ಬೆಂಬಲಿಸಿ: </strong>ರಾಜ್ಯದಲ್ಲಿ ಜಾತ್ಯತೀತತೆ ಉಳಿಸಲು ಅಲ್ಪಸಂಖ್ಯಾತರು ಜೆಡಿಎಸ್ ಇಲ್ಲವೇ ಕಾಂಗ್ರೆಸ್ ಬೆಂಬಲಿಸಿ ಎಂದು ನಾನು ಮುಕ್ತವಾಗಿ ಹೇಳಿದ್ದೇನೆ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆಯೋ ಅಲ್ಲಿ ಕಾಂಗ್ರೆಸ್ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಜೆಡಿಎಸ್ ಮುಂದೆ ಇದೆಯೋ ಅಲ್ಲಿ ಜೆಡಿಎಸ್ ಬೆಂಬಲಿಸಿ ಎಂದು ಕೋರಿದ್ದೇನೆ. ಸಿದ್ದರಾಮಯ್ಯ ಥರ ಕೀಳುಮಟ್ಟದ ರಾಜಕಾರಣ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಸಿಂದಗಿ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ಸಾಧ್ಯತೆ ಇದೆ. ಹಾನಗಲ್ನಲ್ಲೂ ಪೈಪೋಟಿ ನೀಡಲಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಆರ್ಎಸ್ಎಸ್ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಈ ಬಗ್ಗೆ ಯಾವುದೇ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಬಿಜೆಪಿಯು ಆರ್ ಎಸ್ ಜೊತೆ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿದೆ' ಎಂದು ದೂರಿದರು. ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ಉಗ್ರರು ಶಾಲೆಗೆ ನುಗ್ಗಿ ಶಿಕ್ಷಕರನ್ನು ಕೊಂದು ಹಾಕಿದ್ದಾರೆ. ಈ ವರ್ಷ ಗಡಿಯಲ್ಲಿ ಹೆಚ್ಚು ಸೈನಿಕರ ಸಾವಾಗಿದೆ. ಇದೇನಾ ಆರ್ಎಸ್ಎಸ್ ನಿಮಗೆ ಸರ್ಕಾರ ನಡೆಸುವುದು ಹೇಗೆ ಎಂದು ಹೇಳಿಕೊಟ್ಟಿರುವ ಪಾಠ' ಎಂದು ಪ್ರಶ್ನಿಸಿದರು.</p>.<p><strong>ಕಾಂಗ್ರೆಸ್ ಬೆಂಬಲಿಸಿ: </strong>ರಾಜ್ಯದಲ್ಲಿ ಜಾತ್ಯತೀತತೆ ಉಳಿಸಲು ಅಲ್ಪಸಂಖ್ಯಾತರು ಜೆಡಿಎಸ್ ಇಲ್ಲವೇ ಕಾಂಗ್ರೆಸ್ ಬೆಂಬಲಿಸಿ ಎಂದು ನಾನು ಮುಕ್ತವಾಗಿ ಹೇಳಿದ್ದೇನೆ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆಯೋ ಅಲ್ಲಿ ಕಾಂಗ್ರೆಸ್ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಜೆಡಿಎಸ್ ಮುಂದೆ ಇದೆಯೋ ಅಲ್ಲಿ ಜೆಡಿಎಸ್ ಬೆಂಬಲಿಸಿ ಎಂದು ಕೋರಿದ್ದೇನೆ. ಸಿದ್ದರಾಮಯ್ಯ ಥರ ಕೀಳುಮಟ್ಟದ ರಾಜಕಾರಣ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ಸಿಂದಗಿ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ಸಾಧ್ಯತೆ ಇದೆ. ಹಾನಗಲ್ನಲ್ಲೂ ಪೈಪೋಟಿ ನೀಡಲಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>