<p><strong>ರಾಮನಗರ</strong>: ಕಾನೂನಾತ್ಮಕವಾಗಿ ದತ್ತು ಪಡೆಯದೇ ಮಗುವಿನ ಪಾಲನೆ ಮಾಡುತ್ತಿದ್ದವರ ವಿರುದ್ಧ ಚನ್ನಪಟ್ಟಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಚನ್ನಪಟ್ಟಣ ತಾಲ್ಲೂಕಿನ ಅಪ್ಪಗರೆ ಗ್ರಾಮದ ಮಹಿಳೆಯೊಬ್ಬರು 12 ದಿನದ ಹೆಣ್ಣು ಮಗುವನ್ನು ತಮ್ಮ ಮನೆಯಲ್ಲಿ ಸಾಕುತ್ತಿದ್ದರು. ಆದರೆ, ಆ ಮಗು ಅವರದ್ದಲ್ಲ ಎಂದು ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಚನ್ನಪಟ್ಟಣದ ಶಿಶು ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಂಬಂಧಿಸಿದ ಪೋಷಕರು ವಿಚಾರಣೆ ಎದುರಿಸಿದರು.</p>.<p>ಪರಿಚಯಸ್ಥರು ಮಗುವನ್ನು ಬೆಂಗಳೂರಿನಿಂದ ತಂದುಕೊಟ್ಟಿದ್ದಾಗಿ ಆ ಮಹಿಳೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ. ಮಗುವಿನ ಮಾರಾಟ ಮತ್ತು ಅಕ್ರಮ ಸಾಗಣೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸೂಚನೆ ಮೇರೆಗೆ ಚನ್ನಪಟ್ಟಣ ಸಿಡಿಪಿಒ ಸಿದ್ದಲಿಂಗಯ್ಯ ಚನ್ನಪಟ್ಟಣ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕಾನೂನಾತ್ಮಕವಾಗಿ ದತ್ತು ಪಡೆಯದೇ ಮಗುವಿನ ಪಾಲನೆ ಮಾಡುತ್ತಿದ್ದವರ ವಿರುದ್ಧ ಚನ್ನಪಟ್ಟಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಚನ್ನಪಟ್ಟಣ ತಾಲ್ಲೂಕಿನ ಅಪ್ಪಗರೆ ಗ್ರಾಮದ ಮಹಿಳೆಯೊಬ್ಬರು 12 ದಿನದ ಹೆಣ್ಣು ಮಗುವನ್ನು ತಮ್ಮ ಮನೆಯಲ್ಲಿ ಸಾಕುತ್ತಿದ್ದರು. ಆದರೆ, ಆ ಮಗು ಅವರದ್ದಲ್ಲ ಎಂದು ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಚನ್ನಪಟ್ಟಣದ ಶಿಶು ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಂಬಂಧಿಸಿದ ಪೋಷಕರು ವಿಚಾರಣೆ ಎದುರಿಸಿದರು.</p>.<p>ಪರಿಚಯಸ್ಥರು ಮಗುವನ್ನು ಬೆಂಗಳೂರಿನಿಂದ ತಂದುಕೊಟ್ಟಿದ್ದಾಗಿ ಆ ಮಹಿಳೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ. ಮಗುವಿನ ಮಾರಾಟ ಮತ್ತು ಅಕ್ರಮ ಸಾಗಣೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸೂಚನೆ ಮೇರೆಗೆ ಚನ್ನಪಟ್ಟಣ ಸಿಡಿಪಿಒ ಸಿದ್ದಲಿಂಗಯ್ಯ ಚನ್ನಪಟ್ಟಣ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>