<p><strong>ರಾಮನಗರ: </strong>ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಪೆಟ್ರೋಲ್ ಬಂಕ್ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ಕುರಿತು ಅಣಕು ಪ್ರದರ್ಶನದ ಮೂಲಕ ಪ್ರತಿಭಟನಾಕಾರರು ಗಮನ ಸೆಳೆದರು.</p>.<p>‘ಕೊರೊನಾ ಸೋಂಕಿತನೊಬ್ಬ ಆಸ್ಪತ್ರೆಗೆ ದಾಖಲಾಗಲು ಆಂಬುಲೆನ್ಸ್ ಮೂಲಕ ತೆರಳುತ್ತಿರುತ್ತಾನೆ. ಈ ವೇಳೆ ಆಂಬುಲೆನ್ಸ್ ಪೆಟ್ರೋಲ್ ಹಾಕಿಸಲು ಚಾಲಕ ಮುಂದಾಗುತ್ತಾನೆ. ಅವನ ಬಳಿ ಹಣ ಇಲ್ಲದೇ ಸೋಂಕಿತನನ್ನು ವಿಚಾರಿಸುತ್ತಾನೆ. ಈ ವೇಳೆ ಪೆಟ್ರೋಲ್ ದರ ಕೇಳಿ ಸೋಂಕಿತ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗುತ್ತಾನೆ.. ಹೀಗೆ ಕಥೆಯ ಮೂಲಕವೇ ಸದ್ಯದ ಚಿತ್ರಣ ಬಿಚ್ಚಿಡುವ ಪ್ರಯತ್ನ<br />ನಡೆಯಿತು.</p>.<p>ಮುಖಂಡ ಇಕ್ಬಾಲ್ ಹುಸೇನ್ ಮಾತನಾಡಿ, ‘ರಾಜ್ಯದ ಮಹಾನಗರಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ ₹100ಕ್ಕೆ ಮಾರಾಟವಾಗುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ತತ್ತರಿಸಿದೆ. ಕೇಂದ್ರ ಸರ್ಕಾರ ಇನ್ನಾದರೂ ತೈಲ ಬೆಲೆಯನ್ನು ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮನಮೋಹನ್ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದ ವೇಳೆ, ಲೀಟರ್ ಪೆಟ್ರೋಲ್ ₹65ಕ್ಕೆ ಲಭ್ಯವಾಗುತ್ತಿತ್ತು ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್, ಮಾಜಿ ಶಾಸಕ ಕೆ.ರಾಜು, ಮುಖಂಡರಾದ ಎ.ಬಿ. ಚೇತನಕುಮಾರ್, ಲೋಹಿತ್ ಬಾಬು, ರಮೇಶ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಪೆಟ್ರೋಲ್ ಬಂಕ್ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ಕುರಿತು ಅಣಕು ಪ್ರದರ್ಶನದ ಮೂಲಕ ಪ್ರತಿಭಟನಾಕಾರರು ಗಮನ ಸೆಳೆದರು.</p>.<p>‘ಕೊರೊನಾ ಸೋಂಕಿತನೊಬ್ಬ ಆಸ್ಪತ್ರೆಗೆ ದಾಖಲಾಗಲು ಆಂಬುಲೆನ್ಸ್ ಮೂಲಕ ತೆರಳುತ್ತಿರುತ್ತಾನೆ. ಈ ವೇಳೆ ಆಂಬುಲೆನ್ಸ್ ಪೆಟ್ರೋಲ್ ಹಾಕಿಸಲು ಚಾಲಕ ಮುಂದಾಗುತ್ತಾನೆ. ಅವನ ಬಳಿ ಹಣ ಇಲ್ಲದೇ ಸೋಂಕಿತನನ್ನು ವಿಚಾರಿಸುತ್ತಾನೆ. ಈ ವೇಳೆ ಪೆಟ್ರೋಲ್ ದರ ಕೇಳಿ ಸೋಂಕಿತ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗುತ್ತಾನೆ.. ಹೀಗೆ ಕಥೆಯ ಮೂಲಕವೇ ಸದ್ಯದ ಚಿತ್ರಣ ಬಿಚ್ಚಿಡುವ ಪ್ರಯತ್ನ<br />ನಡೆಯಿತು.</p>.<p>ಮುಖಂಡ ಇಕ್ಬಾಲ್ ಹುಸೇನ್ ಮಾತನಾಡಿ, ‘ರಾಜ್ಯದ ಮಹಾನಗರಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ ₹100ಕ್ಕೆ ಮಾರಾಟವಾಗುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ತತ್ತರಿಸಿದೆ. ಕೇಂದ್ರ ಸರ್ಕಾರ ಇನ್ನಾದರೂ ತೈಲ ಬೆಲೆಯನ್ನು ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮನಮೋಹನ್ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದ ವೇಳೆ, ಲೀಟರ್ ಪೆಟ್ರೋಲ್ ₹65ಕ್ಕೆ ಲಭ್ಯವಾಗುತ್ತಿತ್ತು ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್, ಮಾಜಿ ಶಾಸಕ ಕೆ.ರಾಜು, ಮುಖಂಡರಾದ ಎ.ಬಿ. ಚೇತನಕುಮಾರ್, ಲೋಹಿತ್ ಬಾಬು, ರಮೇಶ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>