ಕೋವಿಡ್ ಎರಡನೇ ಅಲೆಗೆ ರೈತಾಪಿ ವರ್ಗ ತೊಂದರೆಗೆ ಸಿಲುಕಿದೆ. ರೈತರು ಬೆಳೆದ ಜೋಳ, ರಾಗಿ, ತರಕಾರಿ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಈ ನಡುವೆಯೇ ಹಾಲಿನ ಖರೀದಿ ದರ ಕಡಿತ ಮಾಡಿರುವುದರಿಂದ ಉತ್ಪಾದಕರು ತೊಂದರೆಗೆ ಸಿಲುಕಿದ್ದಾರೆ. ಮತ್ತೊಂದೆಡೆರೈತರಿಗೆ ಸರ್ಕಾರ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ರೈತರಿಗೆ ರಾಗಿ ಖರೀದಿಸಿರುವ ಹಣವನ್ನೂ ನೀಡಿಲ್ಲ. ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗದೆ ಕಂಗಾಲಾಗಿದ್ದಾರೆ.