ಒಕ್ಕೂಟಕ್ಕೆ ಬರುವ ಲಾಭದ ಹಣವನ್ನು ರೈತರ ಅಭ್ಯುದಯಕ್ಕೆ ವಿನಿಯೋಗಿಸಲಾಗುವುದು. ರಾಸುಗಳಿಗೆ ವಿಮೆ, ಬಮೂಲ್ ಕಲ್ಯಾಣ ಟ್ರಸ್ಟ್ ಮೂಲಕ ಸೌಲಭ್ಯ, ರಿಯಾಯಿತಿ ದರದಲ್ಲಿ ಚಾಪ್ ಕಟ್ಟರ್ ಸೇರಿದಂತೆ ಇನ್ನಿತರ ಸಲಕರಣೆಗಳ ವಿತರಣೆ, ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮ ಮೂಲಕ ಲಾಭದ ಹಣವನ್ನು ರೈತರ ಶ್ರೇಯೋಭಿವೃದ್ಧಿಗೆ ವಿನಿಯೋಗಿಸಲಾಗುವುದು. ಒಕ್ಕೂಟ ಎಂದಿಗೂ ರೈತರ ಪರವಾಗಿಯೇ ಕೆಲಸ ಮಾಡಲಿದೆ ಎಂದು ತಿಳಿಸಿದರು.