<p><strong>ಚನ್ನಪಟ್ಟಣ:</strong> ಚನ್ನಪಟ್ಟಣ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ₹ 150 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮುಖ್ಯಮಂತ್ರಿಗಳು ಗುರುವಾರವಷ್ಟೆ ಚನ್ನಪಟ್ಟಣ ತಾಲ್ಲೂಕಿನ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿಶೇಷ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಅನುದಾನದಲ್ಲಿ ಆಗಬೇಕಾದ ಕಾಮಗಾರಿಗಳನ್ನು ರೂಪಿಸುವಂತೆಯೂ ಸೂಚಿಸಿದ್ದಾರೆ. ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ನೀಡಲು 5 ಸಾವಿರ ಮನೆಗಳು ಮಂಜೂರಾಗಿವೆ. ಈ ಮೂಲಕ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೊಸ ಬದಲಾವಣೆ ತರಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಚನ್ನಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನೆ ಸಭೆಗಳಲ್ಲಿ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗರಕಹಳ್ಳಿ ಏತನೀರಾವರಿ ಯೋಜನೆಯ ಪುನಶ್ಚೇತನ, ತಾಲ್ಲೂಕಿನಾದ್ಯಂತ ಚೆಕ್ ಡ್ಯಾಂಗಳು, ಸೇತುವೆಗಳ ನಿರ್ಮಾಣಕ್ಕೆ ₹ 115 ಕೋಟಿ ಮಂಜೂರಾಗಿದೆ. ಸತ್ತೇಗಾಲದಿಂದ ಇಗ್ಗಲೂರು ಮೂಲಕ ರಾಮನಗರ-ಚನ್ನಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಜಲಸಂಪನ್ಮೂಲ ಇಲಾಖೆಯಿಂದ ಜವಾಬ್ದಾರಿ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಾಡುಪ್ರಾಣಿಗಳ ಉಪಟಳದಿಂದ ರಕ್ಷಣೆಯ ಕಾರ್ಯಾಚರಣೆಗೆ ₹ 65 ಕೋಟಿ ಬಿಡುಗಡೆ ಮಾಡಲಾಗಿದೆ. ಆಶ್ರಯ ಮನೆ ಯೋಜನೆಯಡಿ ನಿವೇಶನಕ್ಕಾಗಿ 7 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿವೇಶನ ನೀಡಲು ಈಗಾಗಲೇ 117 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಒಟ್ಟಾರೆ 5 ಸಾವಿರ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ ಎಂದರು.</p>.<p>ಅಂಬೇಡ್ಕರ್ ಅಭಿವೃದ್ದಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಒಕ್ಕಲಿಗ, ವೀರಶೈವ ಸಮುದಾಯ ಸೇರಿದಂತೆ ವಿವಿಧ ಅಭಿವೃದ್ದಿ ನಿಗಮಗಳ ಹಲವು ಯೋಜನೆಗಳಡಿ ಬಡವರ ಕಲ್ಯಾಣಕ್ಕೆ ನೆರವು, ಸಾಲಸೌಲಭ್ಯ, ಸಹಾಯಧನದ ಯೋಜನೆಗಳನ್ನು ನೀಡಲಾಗುತ್ತದೆ. ಅರ್ಹರು ಅವುಗಳ ಪ್ರಯೋಜನ ಪಡೆಯಬೇಕು ಎಂದರು.</p>.<p>ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿ ಇಲ್ಲದ ಕಾರಣ, ನಿಮ್ಮ ಮನೆ ಮಗನಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆ ಇಲ್ಲ. ರಾಜಕೀಯ ಮಾಡುವುದಕ್ಕಿಂತ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ತೋರಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಚನ್ನಪಟ್ಟಣ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ₹ 150 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮುಖ್ಯಮಂತ್ರಿಗಳು ಗುರುವಾರವಷ್ಟೆ ಚನ್ನಪಟ್ಟಣ ತಾಲ್ಲೂಕಿನ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿಶೇಷ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಅನುದಾನದಲ್ಲಿ ಆಗಬೇಕಾದ ಕಾಮಗಾರಿಗಳನ್ನು ರೂಪಿಸುವಂತೆಯೂ ಸೂಚಿಸಿದ್ದಾರೆ. ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ನೀಡಲು 5 ಸಾವಿರ ಮನೆಗಳು ಮಂಜೂರಾಗಿವೆ. ಈ ಮೂಲಕ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೊಸ ಬದಲಾವಣೆ ತರಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಚನ್ನಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನೆ ಸಭೆಗಳಲ್ಲಿ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗರಕಹಳ್ಳಿ ಏತನೀರಾವರಿ ಯೋಜನೆಯ ಪುನಶ್ಚೇತನ, ತಾಲ್ಲೂಕಿನಾದ್ಯಂತ ಚೆಕ್ ಡ್ಯಾಂಗಳು, ಸೇತುವೆಗಳ ನಿರ್ಮಾಣಕ್ಕೆ ₹ 115 ಕೋಟಿ ಮಂಜೂರಾಗಿದೆ. ಸತ್ತೇಗಾಲದಿಂದ ಇಗ್ಗಲೂರು ಮೂಲಕ ರಾಮನಗರ-ಚನ್ನಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಜಲಸಂಪನ್ಮೂಲ ಇಲಾಖೆಯಿಂದ ಜವಾಬ್ದಾರಿ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಾಡುಪ್ರಾಣಿಗಳ ಉಪಟಳದಿಂದ ರಕ್ಷಣೆಯ ಕಾರ್ಯಾಚರಣೆಗೆ ₹ 65 ಕೋಟಿ ಬಿಡುಗಡೆ ಮಾಡಲಾಗಿದೆ. ಆಶ್ರಯ ಮನೆ ಯೋಜನೆಯಡಿ ನಿವೇಶನಕ್ಕಾಗಿ 7 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿವೇಶನ ನೀಡಲು ಈಗಾಗಲೇ 117 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಒಟ್ಟಾರೆ 5 ಸಾವಿರ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ ಎಂದರು.</p>.<p>ಅಂಬೇಡ್ಕರ್ ಅಭಿವೃದ್ದಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಒಕ್ಕಲಿಗ, ವೀರಶೈವ ಸಮುದಾಯ ಸೇರಿದಂತೆ ವಿವಿಧ ಅಭಿವೃದ್ದಿ ನಿಗಮಗಳ ಹಲವು ಯೋಜನೆಗಳಡಿ ಬಡವರ ಕಲ್ಯಾಣಕ್ಕೆ ನೆರವು, ಸಾಲಸೌಲಭ್ಯ, ಸಹಾಯಧನದ ಯೋಜನೆಗಳನ್ನು ನೀಡಲಾಗುತ್ತದೆ. ಅರ್ಹರು ಅವುಗಳ ಪ್ರಯೋಜನ ಪಡೆಯಬೇಕು ಎಂದರು.</p>.<p>ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿ ಇಲ್ಲದ ಕಾರಣ, ನಿಮ್ಮ ಮನೆ ಮಗನಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆ ಇಲ್ಲ. ರಾಜಕೀಯ ಮಾಡುವುದಕ್ಕಿಂತ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ತೋರಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>