ಒಂದು ವೇಳೆ ರೀಲರ್ಗಳು ಗೂಡು ಖರೀದಿ ಬಂದ್ ಮಾಡಿದರೆ ರೇಷ್ಮೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, ಈ ಭಾಗದ ಲಕ್ಷಾಂತರ ಮಂದಿ ರೈತರು ಬೆಳೆದ ಗೂಡು ಬೀದಿಗೆ ಬೀಳಲಿದೆ.