‘ಸದಾ ಉತ್ತಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು. ಧಾರ್ಮಿಕ ಆಚರಣೆಗಳು ಉತ್ತಮ ಸಂಸ್ಕಾರ ಕಲಿಸುತ್ತವೆ. ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯ ಹಾಗೂ ಧರ್ಮ ಸಭೆಯು ಸಮಯೋಚಿತವಾಗಿದೆ. ಗ್ರಾಮಾಭಿವೃದ್ಧಿ ಸಂಸ್ಥೆಯು ಕೇವಲ ಪೂಜೆ ಪುನಸ್ಕಾರಗಳಿಗೆ ಸೀಮಿತವಾಗಿಲ್ಲ. ಮದ್ಯವರ್ಜನ ಶಿಬಿರ, ಮಹಿಳಾ ಸ್ವಸಹಾಯ ಸಂಘಗಳ ಬಲವರ್ಧನೆ, ಆರ್ಥಿಕ ನೆರವು, ತರಬೇತಿ ಕಾರ್ಯಾಗಾರ ಮೊದಲಾದ ಜನಪರ ಕಾರ್ಯಗಳನ್ನು ಹಾಕಿಕೊಳ್ಳುತ್ತಿದೆ. ಇದು ಪ್ರಶಂಸನೀಯ’ ಎಂದರು.