ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಎಚ್‌ಡಿಕೆ

Last Updated 22 ಫೆಬ್ರುವರಿ 2021, 5:36 IST
ಅಕ್ಷರ ಗಾತ್ರ

ರಾಮನಗರ: ನಗರದ ಎಂ.ಜಿ. ರಸ್ತೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಾಲಯದ ಶತಮಾನೋತ್ಸವ, ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಮತ್ತು ನೂತನ ರಥದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ದೊರೆಯಿತು.

ಬೆಳಿಗ್ಗೆ ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ನಂತರದಲ್ಲಿ ಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾ ಸಂಕಲ್ಪ, ದೇವನಾಂದಿ, ರಕ್ಷಾ ಬಂಧನ, ಋತ್ವಿಜಾವರಣ, ಜಲಾಧಿವಾಸ, ಪುಷ್ಪಾಧಿವಾಸ, ಗಣಪತಿ ಹೋಮ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಸಂಜೆ ದೇವರಿಗೆ ಕಂಕಣ ಬಂಧನ, ಬಿಂಬಶುದ್ಧಿ, ಕಳಸ ಪ್ರತಿಷ್ಠಾಪನೆ, ಪ್ರಾಯಶ್ಚಿತ್ತ ಹೋಮ, ಆದಿವಾಸ ಹೋಮ, ಸಪ್ತಾದಿವಾಸ, ರಾಕ್ಷೋಘ್ನ ಹೋಮ, ವಾಸ್ತು ಹೋಮ ಮತ್ತು ಪ್ರತಿಷ್ಠಾಂಗ ಹೋಮಗಳು, ಅಷ್ಠದಿಗ್ಬಂದನ ಕಾರ್ಯಕ್ರಮಗಳು
ನೆರವೇರಿದವು.

ರಥಕ್ಕೆ ಚಾಲನೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಮಧ್ಯಾಹ್ನ ದೇಗುಲದ ಹೊಸ ರಥವನ್ನು ಎಳೆಯುವ ಮೂಲಕ ರಥವನ್ನು ದೇವಿಯ ಸೇವೆಗೆ ಸಮರ್ಪಿಸಿದರು. ಆರ್ಯ ವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ವಾಸವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಐ.ಎಸ್. ಪ್ರಸಾದ್, ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಕೆ.ಎಲ್. ರತ್ನಶೇಖರ್, ಕಾರ್ಯದರ್ಶಿ ಉಮೇಶ್‌, ಜೆಡಿಎಸ್ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT