ಕನಕಪುರ: ‘ಗ್ರಾಮಾಂತರ ವಿದ್ಯಾಪ್ರಚಾರಕ ಸಂಘ (ಆರ್ಇಎಸ್)ದ ಸಾತನೂರು ಪಿಯು ಕಾಲೇಜಿಗೆ ದೈಹಿಕ ಶಿಕ್ಷಣ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕಾನೂನು ಬಾಹಿರ. ಈ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಿ, ಮುಂದೆ ನಿಯಮಬದ್ಧವಾಗಿ ಆಯ್ಕೆಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.