ಕೋವಿಡ್ ವೈರಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಲಾಕ್ಡೌನ್ ಮತ್ತು ಕರ್ಫ್ಯೂನಂತಹ ಕ್ರಮ ಕೈಗೊಂಡಿದ್ದು, ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಪ್ರತಿನಿತ್ಯದ ಆಹಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳಿಗೆ ತಿಂಗಳಿಗೆ ಪ್ರತಿ ಯೂನಿಟ್ಗೆ ತಲಾ 2 ಕೆಜಿ ಅಕ್ಕಿ ಹಾಗೂ 3ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ ಪ್ರತಿ ಯೂನಿಟ್ಗೆ 5 ಕೆಜಿ ಅಕ್ಕಿಯನ್ನು ನಿಗದಿಗೊಳಿಸಿದೆ. ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರದ ನೆರವನ್ನು ಪಡೆದುಕೊಂಡು ಬಿಪಿಎಲ್ ಕಾರ್ಡ್ ಪ್ರತಿ ಯೂನಿಟ್ಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.